Sunday, August 2, 2026
Sunday, August 2, 2026

DDPI Hasana ಸರ್ಕಾರಿ ನೌಕರರಿಂದ ರಾಜಕೀಯ ಪಕ್ಷಗಳ ಪರ ಸಾಮಾಜಿಕ ತಾಣಗಳಲ್ಲಿ ಸಂದೇಶ ಹಂಚಿಕೆ ದಂಡನಾರ್ಹ

Date:

DDPI Hasana ರಾಜ್ಯ ಸರ್ಕಾರಿ ನೌಕರರು ರಾಜಕೀಯ ಪಕ್ಷಗಳ ಪರವಾಗಿ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ. ಒಂದು ವೇಳೆ ಯಾವುದೇ ಪಕ್ಷದ ಪರವಾಗಿ ಸಂದೇಶವನ್ನು ಫಾರ್ವರ್ಡ್ ಮಾಡಿದ್ರೂ, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಸತ್ಯ ಗೊತ್ತಿದ್ರೂ ಹಾಸನದ ನೌಕರನೊಬ್ಬ ಯಾವುದೋ ಪಕ್ಷದ ಪರವಾಗಿ ಪ್ರಚಾರ ಮಾಡಿ ಅಮಾನತಾಗಿರುವ ಘಟನೆ ನಡೆದಿದೆ.

ಹಾಸನದ ಡಿಡಿಪಿಐ ಕಚೇರಿಯಲ್ಲಿ ಎಫ್ ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಬಿ.ಹೆಚ್ ಮಂಜುನಾಥ್ ಎಂಬುವರು ಬಿಜೆಪಿ ಪರವಿದ್ದಂತಹ ಸಂದೇಶವೊಂದನ್ನು ಪ್ರೀತಂ ಜೆ ಗೌಡ, ಹಾಸನ ಎಂಎಲ್‌ಎ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾರೆ.
ಹೀಗೆ ಸರ್ಕಾರಿ ಅಧಿಕಾರಿಯಾಗಿದ್ದೂ, ಬಿಜೆಪಿ ಪರವಾಗಿದ್ದಂತ ಸಂದೇಶ ಫಾರ್ವರ್ಡ್ ಮಾಡಿದ್ದಕ್ಕೆ ಮಂಜುನಾಥ್ ವಿರುದ್ಧ ನಾಗೇಂದ್ರ ಎಂಬುವರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು.

DDPI Hasana ಈ ದೂರು ಆಧರಿಸಿ ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಬಿಹೆಚ್ ಮಂಜುನಾಥ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

24 ಗಂಟೆಯೊಳಗೆ ಡಿಸಿಪಿಐಗೆ ಮಾಹಿತಿ ಒದಗಿಸಿ ಎಂದು ಎಡಿಸಿ ಶಾಂತಲಾ ಅವರು ಮಂಜುನಾಥ್ ಗೆ ನೋಟಿಸ್ ನೀಡಿದ್ದರು. ಅದರಂತೆ ಡಿಡಿಪಿಐ ಮಂಜುನಾಥ್ ವಿವರಣೆ ಕೇಳಿದ್ದರು. ಅವರ ವಿವರಣೆಯ ವರದಿಯನ್ನು ಸಹಾಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಲಾಗಿತ್ತು.

ಈ ವರದಿ ಆಧರಿಸಿ, ಪ್ರಥಮ ದರ್ಜೆ ಸಹಾಯಕ ಬಿಹೆಚ್ ಮಂಜುನಾಥ್ ಅನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...