Thursday, June 18, 2026
Thursday, June 18, 2026

K. S. Eshwarappa ಮೋದಿ ಸ್ಪರ್ಧೆ ಬೇಡ ಅಂದರೂ ಸ್ಪರ್ಧಿಸುವುದಾಗಿ ಈಶ್ವರಪ್ಪ ತೀರ್ಮಾನ- ವಿಶ್ವಾಸ್

Date:

K. S. Eshwarappa ಸ್ವತಂತ್ರ‍್ಯ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧಿಸಲಿದ್ದು ಏ.12 ರಂದು ನಾಮಪತ್ರ ಸಲ್ಲಿಸಲಾಗುತ್ತಿದೆ ಎಂದು ಮಾಜಿ ಕಾರ್ಪೊರೇಟರ್ ವಿಶ್ವಾಸ್ ತಿಳಿಸಿದರು.


K. S. Eshwarappa ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಮೋದಿ ಸ್ಪರ್ಧೆ ಬೇಡ ಅಂದರೂ ಸ್ಪರ್ಧಿಸುವುದಾಗಿ ಈಶ್ವರಪ್ಪ ತೀರ್ಮಾನಿಸಿದ ಮೇಲೆ ಮತ್ತೆ ದೆಹಲಿಗೆ ಹೋದಾಗ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲವೆಂದಾಗ ವಾಪಾಸ್ ಆಗಿ ತಮ್ಮ ಸ್ಪರ್ಧೆಯನ್ನು ಈಶ್ವರಪ್ಪನವರು ಗಟ್ಟಿ ಮಾಡಿದರು ಎಂದರು.
ಏ.12 ರಂದು10 ಗಂಟೆಯಿoದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಆರಂಭಿಸಿ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಮಾಜದ ಮುಖಂಡರು,ಈ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ವೇದಿಕೆಗೆ ಅವಕಾಶವಿಲ್ಲದ ಕಾರಣ, ವಾಹನದಲ್ಲಿ ಸ್ಪೀಕರ್ ಬಳಸಿ ಈಶ್ವರಪ್ಪ ಭಾಷಣ ಮಾಡಲಿದ್ದಾರೆ. ನಂತರ ನಾಮಪತ್ರ ಸಲ್ಲಿಸಲಾಗುವುದು. ಪಕ್ಷ ಶುದ್ಧೀಕರಣದ ಮಾತನಾಡಿರುವ ಈಶ್ವರಪ್ಪ ಅವರನ್ನು ಈ ಬಾರಿ ಚುನಾವಣೆಯಲ್ಲಿ2ಲಕ್ಷ ಮತಗಳಿಂದ ಗೆಲ್ಲಿಸಲಾಗುವುದು ಎಂದರು.
ಕರಪತ್ರದಲ್ಲಿಯೂ ಮೋದಿಯವರ ಫೋಟೊ ಬಳಸಿಕೊಳ್ಳುವ ಬಗ್ಗೆ ಚಿಂತಿಸಲಾಗುವುದು. ಮನವೊಲಿಸುವ ಭರವಸೆ ಹಿನ್ನೆಲೆಯಲ್ಲಿ ದೆಹಲಿಗೆ ಹೊದರೂ ಅಮಿತ್ ಶಾ ದೆಹಲಿಗೆ ಹೋದಾಗ ಭೇಟಿಯಾಗದೆ ಅವಮಾನಿಸಿದರು ಎಂದ ಅವರು, ಮೋದಿ ಪೋಟೊ ಬಳಕೆ ವಿಚಾರವಾಗಿ ನ್ಯಾಯಾಲಯದಲ್ಲಿ ಕೆವಿಟ್ ಹಾಕಲಾಗಿದೆ. ನ್ಯಾಯಾಲಯ ಏನು ಸೂಚಿಸಲಿದೆ ಎನ್ನುವುದರ ಮೇಲೆ ಮುಂದೆ ತೀರ್ಮಾನಿಸಲಾಗುವುದು. ನಾಮಪತ್ರ ಸಲ್ಲಿಕೆಯ ನಂತರದ ವಿಚಾರ ಅದು ಮೋದಿ ಫೋಟೊ ಬಳಸಬಾರದು ಎಂದರು ಮನಸ್ಸಿನಿಂದ ತೆಗೆಯಲು ಸಾಧ್ಯವಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...