Sunday, August 2, 2026
Sunday, August 2, 2026

RSS ಆರ್ ಎಸ್ಎಸ್ ಕಟ್ಟಾಳು ಜಗಳೂರು ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ

Date:

RSS ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ದೊಡ್ಡದಿತ್ತು. ಈ ಮಧ್ಯೆ ಸಂಸದ ಸಿದ್ದೇಶ್ವರ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದರಿಂದ ಬೇಸರಗೊಂಡಿರುವ ದಾವಣಗೆರೆ ಜಗಳೂರು ಕ್ಷೇತ್ರದ ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ ಗುರುಸಿದ್ದನಗೌಡ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.
ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಅವರು, ಮಾಜಿ ಶಾಸಕ ಟಿ.ಗುರುಸಿದ್ದ‌ನಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಂಡರು. ಇದೇ ವೇಳೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಟಿ.ಗುರುಸಿದ್ದನಗೌಡ ಪುತ್ರ ಡಾ.ರವಿಕುಮಾರ್‌ ಸಹ ಕಾಂಗ್ರೆಸ್ ಸೇರಿದ್ದಾರೆ.
RSS ಗುರುಸಿದ್ದನಗೌಡ-ಎಸ್ಎಸ್ ಮಲ್ಲಿಕಾರ್ಜುನ್
ಹಾಸನದಲ್ಲಿ ಮುಗಿಯದ ಬೇಗುದಿ: ಪ್ರೀತಂ ಗೌಡರನ್ನು ಟೀಕಿಸಿದ್ದ ಬಿಜೆಪಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿತ!
ನಂತರ ಮಾತನಾಡಿದ ಟಿ ಗುರುಸಿದ್ದನಗೌಡ ಅವರು, ನಾವು ಪಕ್ಷಕ್ಕಾಗಿ ನಿರಂತರವಾಗಿ ದುಡಿದಿದ್ದೇವೆ. ಆದರೆ ನಮಗೆ ಪಕ್ಷದಿಂದ ಅನ್ಯಾಯವಾಗಿದೆ. 20 ವರ್ಷಗಳಿಂದ ಸಂಸದರಾಗಿರುವ ಸಿದ್ದೇಶ್ವರ ಅವರು ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಬೇಕಿತ್ತು. ಈ ಬಾರಿ ನನ್ನ ಪುತ್ರ ಡಾ‌.ರವಿಕುಮಾರ್​ಗೆ ಬಿಜೆಪಿ ಟಿಕೆಟ್​ ಕೊಡಬೇಕಿತ್ತು. ಸಿದ್ದೇಶ್ವರಗೆ ವಯಸ್ಸಾಗಿದೆ. ಹೀಗಾಗಿ ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಬಿಜೆಪಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕಿಡಿಕಾರಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...