Thursday, March 19, 2026
Thursday, March 19, 2026

Summer Camp ಶಾಲೆ ಎಂದರೆ ಕೇವಲ ನೋಟ್ಸ್, ಹೋಮ್ ವರ್ಕ್ ಅಂಕ ಗಳಿಕೆಯಲ್ಲ-ಶ್ರೀ ಸಿದ್ಧವೀರ ಸ್ವಾಮೀಜಿ

Date:

Summer Camp ತಾಳಗುಪ್ಪ ಸಮೀಪದ ಗ್ರಾಮೀಣ ಶಾಲಾ ಮಕ್ಕಳಿಗಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಳೂರು ಆವರಣದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಹಸೆ ಚಿತ್ತಾರ ಪರಿಷತ್ತಿನ ಸಹಯೋಗದೊಂದಿಗೆ ಬೇಸಿಗೆ ಸಂಭ್ರಮ ಕಲಿಕಾ ಶಿಬಿರವನ್ನು ಏಳು ದಿನಗಳ ಕಾಲ ಸ ಹಿ ಪ್ರಾ ಶಾಲೆ ಸೂಳ್ಳೂರು ಇಲ್ಲಿ ಆಯೋಜಿಸಲಾಗಿದ್ದು ಶ್ರೀ ಸಿದ್ದವೀರ ಮಹಾಸ್ವಾಮಿಗಳು ಉದ್ಘಾಟಿಸಿ ವ್ಯಕ್ತಿತ್ವ ವಿಕಸನ ಕುರಿತು ಮಾಹಿತಿ ಹಂಚಿಕೊಂಡರು.

ಶಾಲೆ ಎಂದರೆ ಕೇವಲ ನೋಟ್ಸ್, ಹೋಮವರ್ಕ್ ಅಂಕಗಳಿಕೆಯಲ್ಲ. ಅದರಿಂದಚೆ ಮಕ್ಕಳು ರಚನಾತ್ಮಕವಾಗಿ ತೊಡಗಿಕೊಳ್ಳಬೇಕು. ಮಕ್ಕಳನ್ನು ಸೃಜನಶೀಲತೆ ಮತ್ತು ಅನ್ವೇಷಣಾ ಮನೋಭಾವದತ್ತ ಬೆಳೆಸಲು ವಿಶೇಷ ಕಲಿಕ ಶಿಬಿರಗಳು ಅವಶ್ಯಕವಾಗಿವೆ ಎಂದು ಶಿಬಿರ ನಿರ್ದೇಶಕರು ಮುಖ್ಯ ಗುರುಗಳಾದ ರವಿಚಂದ್ರರವರು ಮಾತನಾಡಿದರು.

Summer Camp ಎಸ್ ಡಿ ಎಂ ಸಿ ಅಧ್ಯಕ್ಷರಾದ ರಘು ಬಿ, ಉಪಾಧ್ಯಕ್ಷರಾದ ಜಾನಕಿ ಗಣಪತಿ, ಅಂಗನವಾಡಿ ಶಿಕ್ಷಕಿ ಜಯಲಕ್ಷ್ಮಿ, ಮಂಜುನಾಥ್ ಮಂಡಗಳಲೆ, ಶಿಕ್ಷಕಿ ಕಲ್ಪನಾ ಮತ್ತು ದಿವ್ಯ, ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಿವಿಧ ಶಾಲಾ ಮಕ್ಕಳು ಹಾಜರಿದ್ದು ವಿವಿಧ ಸೃಜನಶೀಲ ಚಟುವಟಿಕೆಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...