Tuesday, October 1, 2024
Tuesday, October 1, 2024

Union Public Service Commission ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ, ಆದಿತ್ಯ ಶ್ರೀವಾಸ್ತವ್ ಅಗ್ರಸ್ಥಾನ

Date:

Union Public Service Commission ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ, ಆದಿತ್ಯ ಶ್ರೀವಾಸ್ತವ್ ಅಗ್ರಸ್ಥಾನ ಕೇಂದ್ರ ಲೋಕಸೇವಾ ಆಯೋಗ ನಡೆಸಿದ್ದ 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಕಾನ್ನುರದ ಐಐಟಿಯಲ್ಲಿ ಅಧ್ಯಯನ ಮಾಡಿರುವ ಆದಿತ್ಯ ಶ್ರೀವಾಸ್ತವ ಅಗ್ರಸ್ಥಾನ ಪಡೆದಿದ್ದಾರೆ.ಅನಿಮೇಶ್ ಪ್ರಧಾನ್ ಮತ್ತು ಡೋಣೂರು ಅನನ್ಯಾ ರೆಡ್ಡಿ ಕ್ರಮವಾಗಿ ಎರಡು ಮತ್ತು ಮೂರನೇ ರಾಂಕ್ ಪಡೆದಿದ್ದಾರೆ.

1,016 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಅವರಲ್ಲಿ 664 ಪುರುಷರು ಮತ್ತು 352 ಮಹಿಳೆಯರು. ಇವರನ್ನು ವಿವಿಧ ಸೇವೆಗಳಿಗೆ ಆಯೋಗ ಶಿಫಾರಸು ಮಾಡಿದೆ. ಅರ್ಹತೆ ಪಡೆದಿರುವ ಅಗ್ರ 25 ಮಂದಿಯಲ್ಲಿ 10 ಮಹಿಳೆಯರಾಗಿದ್ದರೆ, 15 ಪುರುಷರು.

ಆಯ್ಕೆಯಾಗಿರುವ 1,016 ಅಭ್ಯರ್ಥಿಗಳ ಪೈಕಿ 347 ಮಂದಿ ಸಾಮಾನ್ಯ ವರ್ಗದವರು, 115 ಜನ ಆರ್ಥಿಕವಾಗಿ ದುರ್ಬಲ ವರ್ಗದವರು, 303 ಇತರ ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿಗೆ ಸೇರಿದ 165 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 86 ಮಂದಿ ಇದ್ದಾರೆ ಎಂದು ಯುಪಿಎಸ್‌ಸಿ ತಿಳಿಸಿದೆ.

Union Public Service Commission ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ, ಆದಿತ್ಯ ಶ್ರೀವಾಸ್ತವ್ ಅಗ್ರಸ್ಥಾನ ಆ ಪೈಕಿ 180 ಅರ್ಹರಿಗೆ ಐಎಎಸ್, 37 ಮಂದಿಗೆ ಐಎಫ್‌ಎಸ್ ಮತ್ತು 200 ಅಭ್ಯರ್ಥಿಗಳಿಗೆ ಐಪಿಎಸ್ ಸಿಗಲಿದೆ. ಉಳಿದಂತೆ ಕೇಂದ್ರೀಯ ಗ್ರೂಪ್ ‘ಎ’ ಸೇವೆಗಳಿಗೆ ಸೇರಿದ 613, ಗ್ರೂಪ್ ‘ಬಿ’ ಸೇವೆಗಳಿಗೆ ಸೇರಿದ 113 ಹುದ್ದೆಗಳು ದೊರೆಯಲಿವೆ. 240 ಅಭ್ಯರ್ಥಿಗಳ ಹೆಸರನ್ನು ಕಾಯ್ದಿರಿಸಿದ ಪಟ್ಟಿಯಲ್ಲಿ ಇರಿಸಲಾಗಿದೆ ಎಂದು ಯುಪಿಎಸ್‌ಸಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...