Saturday, September 28, 2024
Saturday, September 28, 2024

DC Shivamogga ಮತದಾನ ಮಹತ್ವ ಕುರಿತು ಕವಿತೆ ಬರೆಯಿರಿ, ಆಯ್ಕೆಯಾದರೆ ಕವಿಗೋಷ್ಠಿಗೆ ಆಹ್ವಾನ

Date:

DC Shivamogga ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಶಿವಮೊಗ್ಗ ಇವರ ಸಹಯೋಗದಲ್ಲಿ ಹಾಗೂ ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ವತಿಯಿಂದ 2024ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ‘ಮತದಾನ ಜಾಗೃತಿಯ ಕುರಿತ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ. ಈ ಕವಿಗೋಷ್ಠಿಯು ದಿನಾಂಕ 23-04- 2024ರಂದು ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಬಿ.ಎಡ್. ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಆಸಕ್ತ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ಮತದಾನ ಜಾಗೃತಿಯ ಹಿನ್ನಲೆಯಲ್ಲಿ ಬರೆದಿರಬೇಕು. ಕವನಗಳು ಚಿಕ್ಕದಾಗಿದ್ದು ಎಲ್ಲೂ ಪ್ರಕಟವಾಗಿರಬಾರದು.

DC Shivamogga ಕವನಗಳು ಮೌಲ್ಯಯುತವಾಗಿದ್ದು, ಸ್ಫೂರ್ತಿದಾಯಕವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವಂತಿರಬೇಕು. ಕವನಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಹೆಸರು, ಚಿಹ್ನೆ, ಗುರುತು, ವ್ಯಕ್ತಿಗಳ ಹೆಸರುಗಳನ್ನು ನಮೂದಿಸಬಾರದು. 3-4 ನಿಮಿಷಗಳಲ್ಲಿ ವಾಚನ ಮಾಡುವಂತಿರಬೇಕು. ಅತ್ಯುತ್ತಮ ಕವನಗಳಿಗೆ ಬಹುಮಾನ ನೀಡಲಾಗುವುದು. ಭಾಗವಹಿಸಿದ ಎಲ್ಲಾ ಕವಿಗಳಿಗೂ ಪ್ರಮಾಣಪತ್ರ ನೀಡಲಾಗುವುದು. ಕವಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಿ ಹಾಗೂ ಕವನಗಳನ್ನು ದಿನಾಂಕ 22-04-2024ರ ಸಂಜೆ 5ಗಂಟೆಯೊಳಗಾಗಿ ತಲುಪಿಸಬೇಕು.

ಸಂಪರ್ಕಿಸಿ:-

ಬಸವನಗೌಡ ಹೆಚ್ ಎನ್:- 9901347264

ಕೆ.ಸಿ ಬಸವರಾಜು
:- 9483003823

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...