Monday, August 3, 2026
Monday, August 3, 2026

K.S.Eshwarappa ಪ್ರಭು ಶ್ರೀರಾಮನ ರಕ್ಷಣೆಯಲ್ಲಿ ನಾನು ಎಂಪಿ ಆಗುತ್ತೇನೆ- ಈಶ್ವರಪ್ಪ

Date:

K.S.Eshwarappa ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಲ್ಲ, ಬಿಜೆಪಿಯಲ್ಲಿ ಇದ್ದವರು ನನ್ನ ಜೊತೆ ಬಂದಿದ್ದಾರೆ. ನನ್ನನ್ನು ಗೆಲ್ಲಿಸಲು ಎಲ್ಲಾ ವರ್ಗದ ಜನ ತಿರ್ಮಾನ ಮಾಡಿದ್ದಾರೆ. ಹೀಗಾಗಿ ಗೆದ್ದೆ ಗೆಲ್ಲುತ್ತೇನೆ ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ಸೋಲಿಸಬೇಕು. ಹಿಂದೂ ಪರ ಹೋರಾಟ ಮಾಡುತ್ತಿರುವ ಈಶ್ವರಪ್ಪ ಗೆಲ್ಲಿಸಬೇಕು ಎಂದು ಜನ ತೀರ್ಮಾನ ಮಾಡಿದ್ದಾರೆ. ಪ್ರಭು ಶ್ರೀರಾಮನ ರಕ್ಷಣೆಯಲ್ಲಿ ನಾನು ಎಂಪಿ ಆಗುತ್ತೇನೆ ಎಂದರು.

ಮೊದಲು ಈಶ್ವರಪ್ಪ ಸ್ಪರ್ಧೆ ಮಾಡಲ್ಲ ಎಂದರು, ಅಮೇಲೆ ನಾಮಪತ್ರ ಸಲ್ಲಿಸಲ್ಲ ಅಂತ ಅಪಪ್ರಚಾರ ಮಾಡಿದರು. ಈಗ ನಾಮಪತ್ರ ವಾಪಸ್ಸು ಪಡೆಯುತ್ತಾರೆ ಅಂತ ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯಲ್ಲ. ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಚೆಂಬು ಅಭಿಯಾನ ಮಾಡುತ್ತಿದೆ. ಮೋದಿಗೆ ಚೆಂಬು ಕೊಡುತ್ತಿದ್ದಾರೆ. ಕಾಂಗ್ರೆಸ್‌ನವರಿಗೆ ಬೇರೆ ಗತಿ ಇಲ್ಲ. ಅವರೇ ಚೊಂಬೇ ಗತಿ. ಜೂನ್ 4 ರಂದು ಇಡೀ ದೇಶದಲ್ಲಿ ಕಾಂಗ್ರೆಸ್ ಕೈಗೆ ಚೆಂಬು ಸಿಗುತ್ತದೆ ಎಂದರು.

K.S.Eshwarappa ರಾಜ್ಯದಲ್ಲಿ ಮುಸಲ್ಮಾನನೊಬ್ಬ ಹಿಂದೂ ಯುವತಿಯನ್ನು ಹತ್ಯೆ ಮಾಡಿದ್ದಾನೆ. ರಾಜ್ಯ ಸರ್ಕಾರ ಹಿಂದುಗಳ ರಕ್ಷಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಮುಸಲ್ಮಾನರನ್ನು ಮಾತ್ರ ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ. ಕೊಲೆ ಮಾಡಿದ ಗುಂಡಾನನ್ನು ಗುಂಡು ಹೊಡೆದು ಸಾಯಿಸಬೇಕಿತ್ತು. ಅದನ್ನು ಬಿಟ್ಟು ವೈಯಕ್ತಿಕ ದ್ವೇಷ ಅನ್ನುತ್ತಿದ್ದಾರೆ. ಇದು ಇಡೀ ದೇಶದ ರಾಜ್ಯದ ಹಿಂದುಗಳಿಗೆ ಮಾಡುತ್ತಿರುವ ಅಪಮಾನ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಇದನ್ನು ಅನುಭವಿಸುತ್ತಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...