Friday, March 27, 2026
Friday, March 27, 2026

Holehonur Police ಹೊಳೆ ಹೊನ್ನೂರಿನ ಬಳಿ ಭದ್ರಾ ಚಾನಲ್ ನಲ್ಲಿ ಮುಳುಗಿ ಇಬ್ಬರ ಬಾಲಕರ ಸಾವು

Date:

Holehonur Police ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ವೇಳೆ ಹೀಗಾಗಿದೆ ಎಂದು ತಿಳಿದು ಬಂದಿದೆ.

ನಡೆದಿದ್ದೇನು?

ಹೊಳೆಹೊನ್ನೂರು ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ರಜತ್‌ ಹಾಗೂ ರೋಹನ್‌ ಎಂದು ಗುರುತಿಸಲಾಗಿದೆ. 15 ವರ್ಷ ಹಾಗೂ 10 ವರ್ಷದ ಬಾಲಕರಿಬ್ಬರು ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದರು. ನಿನ್ನೆ ಸಂಜೆ ಮೂರುವರೆ ನಾಲ್ಕು ಗಂಟೆ ಸುಮಾರಿಗೆ ಇಬ್ಬರು ಭದ್ರಾ ಚಾನಲ್‌ ಬಳಿ ಬಂದಿದ್ದಾರೆ.

Holehonur Police ಚಾನಲ್‌ ಏರಿ ಮೇಲೆ ಬಂದ ಇಬ್ಬರು ಬಾಲಕರ ಪೈಕಿ ಚಿಕ್ಕವನು ನೀರಿಗಿಳಿದಿದ್ದಾನೆ. ಆದರೆ ನೀರಿನ ಸೆಲೆಯಲ್ಲಿ ಆತ ಈಜಲಾಗದೇ ಮುಳಗಲು ಆರಂಭಿಸಿದ್ದಾನೆ. ಆತನನ್ನು ರಕ್ಷಿಸಲು ಇನ್ನೊಬ್ಬನು ನೀರಿಗಿಳಿದಿದ್ದು, ಆತನೂ ಸಹ ಚಾನಲ್‌ನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಸ್ಥಳದಲ್ಲಿ ಬಟ್ಟೆ ಮಾತ್ರ ಪತ್ತೆಯಾಗಿದ್ದರಿಂದ ಪ್ರಕರಣ ಅನುಮಾನ ಸಹ ಮೂಡಿಸಿತ್ತು. ಆನಂತರ ರಾತ್ರಿ 9.30 ರ ಸುಮಾರಿಗೆ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವ ಮಹಜರ್‌ ನಡೆಸಿ ಪೋಷಕರಿಗೆ ಬಾಲಕರ ಮೃತದೇಹವನ್ನು ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...

Online shopping ಆನ್ ಲೈನ್ ಶಾಪಿಂಗ್ ಬಗ್ಗೆ ಬಹಳ ಜಾಗರೂಕರು ಹಾಗು ಜಾಣರಾಗಿರಿ- ಟಿ.ಶಿವಣ್ಣ.

Online shopping ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್...