Friday, February 6, 2026
Friday, February 6, 2026

Holehonur Police ಹೊಳೆ ಹೊನ್ನೂರಿನ ಬಳಿ ಭದ್ರಾ ಚಾನಲ್ ನಲ್ಲಿ ಮುಳುಗಿ ಇಬ್ಬರ ಬಾಲಕರ ಸಾವು

Date:

Holehonur Police ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ವೇಳೆ ಹೀಗಾಗಿದೆ ಎಂದು ತಿಳಿದು ಬಂದಿದೆ.

ನಡೆದಿದ್ದೇನು?

ಹೊಳೆಹೊನ್ನೂರು ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ರಜತ್‌ ಹಾಗೂ ರೋಹನ್‌ ಎಂದು ಗುರುತಿಸಲಾಗಿದೆ. 15 ವರ್ಷ ಹಾಗೂ 10 ವರ್ಷದ ಬಾಲಕರಿಬ್ಬರು ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದರು. ನಿನ್ನೆ ಸಂಜೆ ಮೂರುವರೆ ನಾಲ್ಕು ಗಂಟೆ ಸುಮಾರಿಗೆ ಇಬ್ಬರು ಭದ್ರಾ ಚಾನಲ್‌ ಬಳಿ ಬಂದಿದ್ದಾರೆ.

Holehonur Police ಚಾನಲ್‌ ಏರಿ ಮೇಲೆ ಬಂದ ಇಬ್ಬರು ಬಾಲಕರ ಪೈಕಿ ಚಿಕ್ಕವನು ನೀರಿಗಿಳಿದಿದ್ದಾನೆ. ಆದರೆ ನೀರಿನ ಸೆಲೆಯಲ್ಲಿ ಆತ ಈಜಲಾಗದೇ ಮುಳಗಲು ಆರಂಭಿಸಿದ್ದಾನೆ. ಆತನನ್ನು ರಕ್ಷಿಸಲು ಇನ್ನೊಬ್ಬನು ನೀರಿಗಿಳಿದಿದ್ದು, ಆತನೂ ಸಹ ಚಾನಲ್‌ನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಸ್ಥಳದಲ್ಲಿ ಬಟ್ಟೆ ಮಾತ್ರ ಪತ್ತೆಯಾಗಿದ್ದರಿಂದ ಪ್ರಕರಣ ಅನುಮಾನ ಸಹ ಮೂಡಿಸಿತ್ತು. ಆನಂತರ ರಾತ್ರಿ 9.30 ರ ಸುಮಾರಿಗೆ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವ ಮಹಜರ್‌ ನಡೆಸಿ ಪೋಷಕರಿಗೆ ಬಾಲಕರ ಮೃತದೇಹವನ್ನು ಒಪ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...