Tuesday, December 16, 2025
Tuesday, December 16, 2025

Dr. Raj Kumar ಡಾ.ರಾಜ್ ಭೌತಿಕವಾಗಿ ಇಲ್ಲ.ಆದರೆ ಕನ್ನಡಿಗರ ಮನದಲ್ಲಿ ಸ್ಥಿರವಾಗಿದ್ದಾರೆ- ಎಂ.ಎನ್.ಸುಂದರ ರಾಜ್

Date:

Dr. Raj Kumar ತಮ್ಮ ಐವತ್ತು ವರ್ಷಗಳ ಕಲಾಯಾನದಲ್ಲಿ ಇನ್ನೂರಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟನೆ, ಹನ್ನೊಂದು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ, ಎರಡು ಬಾರಿ ಅತ್ಯುತ್ತಮ ಗಾಯಕ ಪ್ರಶಸ್ತಿ,ಪದ್ಮಭೂಷಣ, ಡಾಕ್ಟರೇಟ್ ಮತ್ತು ನಾಡೋಜ ಪ್ರಶಸ್ತಿ, ದಾದಾ ಸಾಹೇಬ್ ಪ್ರಶಸ್ತಿಗಳಿಸಿದ ಈ ನಟ ಸರಳತೆಯ ಸಾಕಾರ ಮೂರ್ತಿ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರ ರಾಜ್ ತಿಳಿಸಿದರು.

ಅವರು ಸೀನಿಯರ್ ಜೇಸಿಯವರು ರವೀಂದ್ರ ನಗರ. ರೇಣುಕಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಕನ್ನಡ ಚಿತ್ರರಂಗದ ಧ್ರುವತಾರೆ ಎನಿಸಿದ ಡಾ.ರಾಜಕುಮಾರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಡಾ.ರಾಜ್ ಅವರ ಜೀವನದ ಕೆಲ ಘಟನೆಗಳನ್ನು ಮೆಲುಕು ಹಾಕಿದರು. ತಮ್ಮ ನಟನಾ ಚಾತುರ್ಯದಿಂದ ಮತ್ತು ಕಂಠ ಸಿರಿ ಯಿಂದ ಕನ್ನಡಿಗರ ಮನದಲ್ಲಿ ಶಾಶ್ವತ ಸ್ಥಾನ ಗಳಿಸಿ ಅಮರರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

Dr. Raj Kumar ಸಾಮಾಜಿಕ, ಐತಿಹಾಸಿಕ ಮತ್ತು ಪೌರಾಣಿಕ ಪಾತ್ರಗಳಲ್ಲಿ ಮೈಮರೆತು ಲೀಲಾಜಾಲವಾಗಿ ನಟಿಸಿ ಪ್ರಸಿದ್ಧರಾಗಿದ್ದರು ಎಂದು ತಿಳಿಸಿ ಅವರ ಸ್ಮರಣೆ ಇಂದು ನಡೆಯುತ್ತಿರುವುದು ಸಮಯೋಚಿತವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀನಿಯರ್ ಜೇಸಿ ಅಧ್ಯಕ್ಷ ಲಕ್ಷ್ಮೀಕಾಂತ್ ವಹಿಸಿದ್ದರು. ವೇದಿಕೆಯಲ್ಲಿ ಜಿ.ವಿಜಯಕುಮಾರ್ ಉಪಸ್ಥಿತರಿದ್ದರು.

ಶಶಿಕಾಂತ್ ಜೈನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕೆಲ ಭಕ್ತಿಗೀತೆಗಳನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಜೆಸಿಯ ಅಣಜಿ ಬಸವರಾಜ್. ವೆಂಕಟರಮಣ ಜೋಯ್ಸ್.. ಮುರಳೀಧರ. ರಮೇಶ್ ಜಾದವ್. ಉಪಸ್ಥಿತರಿದ್ದರು
ನಂತರ ಅನೇಕ ಕಲಾವಿದರು ರಾಜ್ ಕುಮಾರ್ ಅವರು ಹಾಡಿದ ಕೆಲವು ಗೀತೆಗಳನ್ನು ಹಾಡಿ ರಂಜಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...