Monday, February 2, 2026
Monday, February 2, 2026

SVEEP Shivamogga ಜೋಗ ನೋಡಲು ವೈಭೋಗ.ಮತದಾನ ಮಾಡುವುದು ಸುಯೋಗ” ವಿವಿಧ ಬ್ಯಾಂಕ್ ನೌಕರರಿಂದ ವಿಶಿಷ್ಟ ಮತದಾನ ಜಾಗೃತಿ ವಾಕಥಾನ್

Date:

SVEEP Shivamogga ಜೋಗ ನೋಡಲು ವೈಭೋಗ.ಮತದಾನ ಮಾಡುವುದು ಸುಯೋಗ” ವಿವಿಧ ಬ್ಯಾಂಕ್ ನೌಕರರಿಂದ ವಿಶಿಷ್ಟ ಶಿವಮೊಗ್ಗದಲ್ಲಿ ಇದೆ ಮೊದಲ ಬಾರಿಗೆ ವಿವಿಧ ಬ್ಯಾಂಕ್ ನೌಕರರಿಂದ ಮತದಾನ ಜಾಗೃತಿಗಾಗಿ ವಾಕಥಾನ್ ನಡೆಯುತು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ವಿವಿಧ ಬ್ಯಾಂಕ್‌ಗಳು, ಜಿಲ್ಲಾ ಸ್ವೀಪ್ ಸಮಿತಿ, ಮತದಾನ ಜಾಗೃತಿ ವೇದಿಕೆ ಸಹಯೋಗದಲ್ಲಿ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮ ಶಿವಮೊಗ್ಗದ ಸೈನ್ಸ್ ಮೈದಾನದಿಂದ ಆರಂಭವಾಗಿ‌, ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳ ಮೂಲಕ ಸಾಗುತ್ತ, ಮತದಾರರ ಜಾಗೃತಿ ಘೋಷಣೆಗಳನ್ನು ಪ್ರಚಾರ ಮಾಡಲಾಯಿತು.

ಸೈನ್ಸ್ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಬ್ಯಾಂಕ್ ನೌಕರರು, ಶಿವಪ್ಪ ನಾಯಕ ವೃತ್ತ, ಹಮ್ಮಿರ್ ಅಹಮದ್ ಸರ್ಕಲ್, ಗೋಪಿ ಸರ್ಕಲ್ ಮೂಲಕ ಮಹಾವೀರ ವೃತ್ತದ ವರೆಗೆ ವಾಕಥಾನ್ ಮಾಡಿದರು.

“ಜೋಗ ನೋಡಲು ವೈಭೋಗ, ಮತದಾನ ಮಾಡುವುದು ಸುಯೋಗ”, ” ನಾವು ಶಿವಮೊಗ್ಗ ಜನ, ಮಾಡೇ ಮಾಡ್ತೀವಿ ಮತದಾನ” ಇನ್ನೂ ಮುಂತಾದ ಘೋಷಣೆಗಳನ್ನು ಗಟ್ಟಿಯಾಗಿ ಸಾರುತ್ತಾ ಅತ್ಯಂತ ಉತ್ಸಾಹದಲ್ಲಿ ಬ್ಯಾಂಕ್ ನೌಕರರು ಸಾಗಿದರು. ಮತದಾನದ ಜಾಗೃತಿ ಗೀತೆಗಳನ್ನು ದಾರಿಯುದ್ದಕ್ಕೂ ಹಾಡಿದರು.

ವಾಕಥಾನ್‌ನಲ್ಲಿ ಭಾಗವಹಿಸಿದ್ದ ನೌಕರರು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ನೈತಿಕ ಮತದಾನದ ಪ್ರತಿಜ್ಞೆಯನ್ನು ಸ್ವೀಕರಿಸಿದರು.

SVEEP Shivamogga ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸ್ವೀಪ್ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಎಲ್ಲಾ ನೌಕರರು ಬ್ಯಾಂಕ್ ಗೆ ಬರುವ ಸಾರ್ವಜನಿಕರಲ್ಲಿ ಮತದಾನದ ಅರಿವು ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಲೀಡ್ ಬ್ಯಾಂಕ್ ಎಜಿಎಂ ಅಮರನಾಥ್, ಬ್ಯಾಂಕ್ ಆಫ್ ಬರೋಡ ಎಜಿಎಂ ರವಿ, ಕೆನರಾ ಬ್ಯಾಂಕ್ ಡಿಎಂ ಪದ್ಮಜ , ಕರ್ನಾಟಕ ಗ್ರಾಮೀಣ ಬ್ಯಾಂಕ್ ರೀಜನಲ್ ಮ್ಯಾನೇಜರ್ ಶಾರದಮ್ಮ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿವಿಜನಲ್ ಮ್ಯಾನೇಜರ್ ರಂಗಸ್ವಾಮಿ, ಯೂನಿಯನ್ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ಎಂ ಕೆ ಮುರಳಿ, ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ನಾಗರಾಜ್, ಲೀಡ್ ಬ್ಯಾಂಕ್‌ನ ಅಧಿಕಾರಿ ನೆಲ್ಸನ್,‌ ವಾರ್ತಾಧಿಕಾರಿ ರಾಜು ಆರ್, ರಾಜ್ಯಮಟ್ಟದ ಸ್ವೀಪ್ ತರಬೇತಿದಾರ ನವೀದ್ ಅಹಮದ್ ಪರ್ವಿಜ್ , ಸೇರಿದಂತೆ ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳು, ನೌಕರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...