Thursday, December 18, 2025
Thursday, December 18, 2025

B.Y.Raghavendra ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ- ಬಿ.ವೈ.ರಾಘವೇಂದ್ರ

Date:

B.Y.Raghavendra ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆಯಿದ್ದು, ಇದರ ಪರಿಣಾಮವಾಗಿ ಬಿಜೆಪಿ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಬಿಜೆಪಿ ನಗರ ಮಂಡಲ ವತಿಯಿಂದ ನಗರದ ಸೋಮಿನಕೊಪ್ಪ ರಸ್ತೆಯಲ್ಲಿರುವ ಶಾರದಮ್ಮ ಬಡಾವಣೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರೆಂಟಿಗಳು ರಾಜ್ಯದ ಎಲ್ಲಾ ಜನರಿಗೆ ತಲುಪುವಲ್ಲಿ ವಿಫಲವಾಗಿದೆ. ಇದು ಮೂಗಿಗೆ ತುಪ್ಪ ಸವರುವಂತಹ ಕೆಲಸವಾಗಿದೆ. ರಾಜ್ಯದ ಪ್ರಜ್ಞಾವಂತ ಮತದಾರರು ಇದನ್ನು ಗಮನಿಸುತ್ತಿದ್ದಾರೆ. ಬಿಜೆಪಿಗೆ ಹೆಚ್ಚಿನ ಬೆಂಬಲವನ್ನು ನೀಡಲಿದ್ದಾರೆ ಎಂದು ಹೇಳಿದರು.
ಈ ಚುನಾವಣೆ ರಾಷ್ಟ್ರೀಯ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ನಡೆಯುತ್ತಿರುವ ಚುನಾವಣೆಯಾಗಿದೆ. ಯಾವುದೇ ಕುಟುಂಬದ ವಿಷಯ, ವ್ಯಕ್ತಿಗಳ ವಿಷಯ, ಹಾಗೂ ಟೀಕೆ ಟಿಪ್ಪಣಿಗಳಿಗೆ ಮತದಾರರು ತಲೆ ಕೆಡಿಸಿಕೊಳ್ಳುವುದಿಲ್ಲ, ರಾಷ್ಟ್ರದ ರಕ್ಷಣೆ ಹಾಗೂ ಪ್ರತಿಯೊಬ್ಬ ಪ್ರಜೆಯ ರಕ್ಷಣೆಯನ್ನು ಮಾಡುವಂತಹ ಸರ್ಕಾರವನ್ನು ಆಯ್ಕೆ ಮಾಡಬೇಕೆಂಬುದು ಪ್ರತಿಯೊಬ್ಬ ಭಾರತೀಯನ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಇದಕ್ಕೆ ಯಾವುದೇ ಸಂಶಯವಿಲ್ಲ ಎಂದರು.
B.Y.Raghavendra ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಕಾರ್ಪೋರೇಟರ್‌ಗಳಾದ ಆಶಾ ಚಂದ್ರ ಪ್ಪ, ಬೊಮ್ಮನಕಟ್ಟೆ ಮಾಲತೇಶ್, ಇನ್ನಿತರರ ಸಹಕಾರದಿಂದಾಗಿ ಬೊಮ್ಮನಕಟ್ಟೆ ಭಾಗದಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸುವಂತಹ ಕೆಲಸ ಯಶಸ್ವಿಯಾಗಿದೆ ಎಂದರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಮೋಹನ್‌ರೆಡ್ಡಿ, ನಾಗರಾಜ್, ಸೋಮಶೇಖರ್ ಮತ್ತಿರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...