Thursday, March 19, 2026
Thursday, March 19, 2026

Lok Sabha Election ಬಿಜೆಪಿ,ಕಾಂಗ್ರೆಸ್ ಬಗ್ಗೆ ‘ಗರಂ’ ಹೇಳಿಕೆ ನೀಡಿರುವ ಜನಚೈತನ್ಯ ಕರ್ನಾಟಕ ಸಂಘಟನೆ

Date:

Lok Sabha Election ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಪ್ರಶ್ನಿಸಿ ಪ್ರಜಾತಂತ್ರ ಉಳಿಸಬೇಕೆಂದು ಜನ ಚೈತನ್ಯ ಕರ್ನಾಟಕ ಸಂಘಟನೆಯ ಜಿಲ್ಲಾ ಶಾಖೆ ಕರೆ ನೀಡಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಪದಾಧಿಕಾರಿಗಳು, ಸ್ವಾತಂತ್ರ್ಯ ಬಂದು 77 ವರ್ಷಗಳು ಗತಿಸಿದರೂ ದೇಶದ ಬಡಜನರ, ದಲಿತರ , ಹಿಂದುಳಿದವರಿಗೆ ನ್ಯಾಯ ಸಿಕ್ಕಿಲ್ಲ. ಬಿಜೆಪಿ ಸರಕಾರ ಸುಳ್ಳು ಪ್ರಚಾರ ಮಾಡಿಕೊಂಡು ಬಂದಿದೆ. ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತ ಯುವಜನರನ್ನು ಧರ್ಮದ ಬಲೆಯಲ್ಲಿ ಸಿಲುಕಿಸಿ ಮತರಾಜಕಾರಣ ಮಾಡಲಾಗುತ್ತಿದೆ.

ಸಂವಿಧಾನವನ್ನು ಬದಲಾಯಿಸುವ ಮಾತನ್ನು ಆಡುತ್ತಿರುವ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ.
ಕೋಮುವಾದ ಹಿಂದುತ್ವ ವಿಚಾರ ಹೊರತುಪಡಿಸಿದರೆ, ಬಿಜೆಪಿಗಿಂತ ಕಾಂಗ್ರೆಸ್ ಭಿನ್ನವಾಗಿಲ್ಲ. ಮತದಾರರು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಸಮಸ್ಯೆಗಳ ಕುರಿತು ಅಭ್ಯರ್ಥಿಗಳಿಗೆ ಪ್ರಶ್ನೆ ಮಾಡಬೇಕಿದೆ.

Lok Sabha Election ಮಲೆನಾಡಿನಲ್ಲಿ ಅರಣ್ಯ ಒತ್ತುವರಿ ಸಮಸ್ಯೆ ಇತ್ಯರ್ಥವಾಗಿಲ್ಲ. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರವಿಲ್ಲ. ಸಾವಿರಾರು ಎಕರೆ ಅರಣ್ಯದಲ್ಲಿ ಅಕೇಶಿಯಾ , ನೀಲಗಿರಿ ಬೆಳೆಸಲು ಲೀಜ್ ಪಡೆದಿದ್ದ ಭೂಮಿಯನ್ನು ವಾಪಸ್ ಕೊಡಬೇಕು.ಭದ್ರಾವತಿಯ ಎರಡೂ ಕಾರ್ಖಾನೆಗಳನ್ನು ಪುನರಾರಂಭಿಸಬೇಕು. ಮಲೆನಾಡಿನಿಂದ ದೂರದ ನಗರಗಳಿಗೆ ನೀರು ಕೊಂಡೊಯ್ಯುವ ಯೋಜನೆ ಕೈ ಬಿಡಬೇಕು. ಅರಣ್ಯವಾಸಿಗಳ ಹಿತ ಕಾಪಾಡಬೇಕು.ನಿರುದ್ಯೋಗ ನಿವಾರಣೆಗೆ ಕೈಗಾರಿಕೆ ತರಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ಪಡೆದು ಮತದಾನ ಮಾಡಬೇಕೆಂದು ಜನ ಚೈತನ್ಯ ಕರ್ನಾಟಕದ ಪದಾಧಿಕಾರಿಗಳಾದ ಪ್ರಕಾಶ್, ದೇಶಾದ್ರಿ ಹೊಸ್ಮನೆ,ಭಾಸ್ಕರ್ ಟಿ.ಪಿ. ಶೇಖರನಾಯ್ಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...