CM Siddharamaih ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚಿಗೆ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತ ಯುವತಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಫೋಷಕರಿಗೆ ಸಾಂತ್ವನ ಹೇಳಿದರು.
ಆರೋಪಿಯ ಕೃತ್ಯಕ್ಕೆ ಸರಿ ಸಮನಾದ ಶಿಕ್ಷೆ ಕೊಡಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತದೆ. ಈಗಾಗಲೇ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ. ತನಿಖೆ ಅತ್ಯಂತ ತ್ವರಿತವಾಗಿ ನಡೆಯುತ್ತದೆ ಎಂದು ಭರವಸೆ ನೀಡಿದರು.
CM Siddharamaih ಮುಂದೆ ಯಾರೊಬ್ಬರೂ ಇಂಥಾ ಹೀನ ಕೃತ್ಯಕ್ಕೆ ಕೈ ಹಾಕಬಾರದು ಎನ್ನುವ ಸ್ಪಷ್ಟ ಎಚ್ಚರಿಕೆ ನೀಡುವ ರೀತಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಭರವಸೆಯನ್ನು ಕುಟುಂಬ ಸದಸ್ಯರಿಗೆ ನೀಡಿದ್ದೇನೆ. ಕೊಟ್ಟ ಮಾತಿನಂತೆ ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುತ್ತೇನೆ ಎಂದರು.