Wednesday, August 12, 2026
Wednesday, August 12, 2026

Amith Shah ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲಿ ಶೇ.4 ಮುಸ್ಲೀಂ ಮೀಸಲಾತಿ ರದ್ದು ಮಾಡಿ ಎಸ್ಸಿ ಎಸ್ಟಿಗೆ ನೀಡುತ್ತೇವೆ- ಅಮಿತ್ ಶಾ

Date:

Amith Shah ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಬಿಆರ್‌ಎಸ್‌ ನೀಡಿರುವ ಮುಸ್ಲಿಂ ಮೀಸಲಾತಿಯನ್ನು ಬಿಜೆಪಿ ಕೊನೆಗೊಳಿಸಲಿದೆ ಮತ್ತು ಅದನ್ನು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

Amith Shah ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುಸ್ಲಿಮರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ರಕ್ಷಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಈ ಮೊದಲು ಹೇಳಿದ್ದರು. ಅವಿಭಜಿತ ರಾಜ್ಯದಲ್ಲಿ ಅಂದಿನ ಕಾಂಗ್ರೆಸ್ ಸಿಎಂ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರು ಪ್ರಾರಂಭಿಸಿದ 4% ಮುಸ್ಲಿಂ ಕೋಟಾವನ್ನು ಷಾ ಅಥವಾ ಪ್ರಧಾನಿ ನರೇಂದ್ರ ಮೋದಿ ರದ್ದುಗೊಳಿಸಲು ಸಾಧ್ಯವಿಲ್ಲ. ಬಿಜೆಪಿಯ ಟೀಕೆಗಳ ನಡುವೆ ರಾಜ್ಯದ ಹಿಂದಿನ ಬಿಆರ್‌ಎಸ್ ಸರ್ಕಾರವೂ ಮೀಸಲಾತಿಯನ್ನು ತೆಗೆದುಹಾಕಲು ನಿರಾಕರಿಸಿತ್ತು. 4% ಮುಸ್ಲಿಂ ಮೀಸಲಾತಿ ಧರ್ಮದ ಆಧಾರದ ಮೇಲೆ ಅಲ್ಲ. ಅದು ಸಾಮಾಜಿಕ-ಆರ್ಥಿಕ ಸ್ಥಾನಮಾನದ ಆಧಾರದ ಮೇಲೆ ಎಂದು ನವೆಂಬರ್‌ನಲ್ಲಿ ಅಂದಿನ ರಾಜ್ಯ ಸಚಿವ ಕೆ.ಟಿ.ರಾಮರಾವ್ ಹೇಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...