Saturday, December 6, 2025
Saturday, December 6, 2025

Lok Sabha Election ಮತದಾನ ಬಹಿಷ್ಕರಿಸಿ ನಿರ್ಧಾರ ತಿಳಿಸಿದ ‌ಹೊಸನಗರ ತಾಲ್ಲೂಕಿನ ಕುಂಭತ್ತಿ ಗ್ರಾಮಸ್ಥರು

Date:

Lok Sabha Election ಹೊಸನಗರ ತಾಲ್ಲೂಕಿನ ನಗರ ಹೋಬಳಿ ಕುಂಭತ್ತಿ ಗ್ರಾಮದ ಸ.ನಂ.5ರಲ್ಲಿ ಇಬ್ಬರು ಜಂಟಿಯಾಗಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರಿಗೆ ಪ್ರತೀದಿನವೂ ಒಂದಲ್ಲ ಒಂದು ಸಮಸ್ಯೆಯಾಗುತ್ತಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವಂತಹ ಸ್ಥಿತಿ ಬಂದಿದೆ.

ಈ ಬಗ್ಗೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳಿಗೆ ದೂರು ಕೊಟ್ಟರೂ ಈವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನದಿಂದ ದೂರವೇ ಉಳಿದು ಚುನಾವಣೆ ಬಹಿಷ್ಕರಿಸುವುದಾಗಿ ನಿರ್ಧರಿಸಿರುವ ಕುಂಭತ್ತಿ ಗ್ರಾಮಸ್ಥರು ತಹಶೀಲ್ದಾರ್ ಮೂಲಕ ಇಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.

Lok Sabha Election ಕಾರಣಗಿರಿಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಗಣಿಗಾರಿಕೆಯನ್ನು ವಿರೋಧಿಸಿ ಸಾಮೂಹಿಕ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಗಣಿಗಾರಿಕೆ ವಿರೋಧಿ ಭಿತ್ತಿಪತ್ರಗಳನ್ನು ಹಿಡಿದು ಗಣಿಗಾರಿಕೆಯ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೇ, ತಮಗೆ ನ್ಯಾಯ ದೊರೆಯುವವರೆಗೂ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...