Wednesday, December 17, 2025
Wednesday, December 17, 2025

Dr.Ivan D’Souza ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲದ ವಿಷಯಗಳನ್ನ ಪ್ರಧಾನಿ ತಮ್ಮ ಭಾಷಣಗಳಲ್ಲಿ ಪ್ರಸ್ತಾಪಿಸಿ ಟೀಕಿಸುತ್ತಿದ್ದಾರೆ- ಐವಾನ್ ಡಿಸೋಜಾ

Date:

Dr.Ivan D’Souza ಪ್ರಧಾನಿ ಮೋದಿ ಅವರ ಭಾಷಣವನ್ನು ಬಹಳ ವರ್ಷದಿಂದ ಗಮನಿಸುತ್ತಿದ್ದೇನೆ. ಈ ಬಾರಿ ಅವರು ಪ್ರಧಾನಿ ವಿಚಲಿತರಾದಂತೆ ಕಾಣುತ್ತಿದ್ದಾರೆ ಎಂದು ಕೆಪಿಸಿಸಿಯ ಮುಖ್ಯ ವಕ್ತಾರ ಐವಾನ್ ಡಿಸೋಜ ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಕಚೇರಿಯಲ್ಲಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಅವರ ಭಾಷಣದಲ್ಲಿ ಬದಲಾವಣೆ ಕಂಡು ಬರುತ್ತಿದೆ. ಸುಳ್ಳುಗಳನ್ನು ಹೇಳುತ್ತಿದ್ದಾರೆ .
ಕಾಂಗ್ರೆಸ್ ಬಹುಸಂಖ್ಯಾತರ ಮೀಸಲಾತಿ ಕಸಿದುಕೊಂಡು ಅಲ್ಪಸಂಖ್ಯಾತರಿಗೆ ಕೊಡುತ್ತಿದ್ದಾರೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ದೇಶದ ಆಸ್ತಿಯನ್ನೂ ಸಹ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದಾರೆ ಎನ್ನುತ್ತಿದ್ದಾರೆ. ಪ್ರಣಾಳಿಕೆಯಲ್ಲಿ ಇಲ್ಲದಿದ್ದರೂ ಹೀಗೆ ಹೇಳಬಹುದೇ ಎಂದು ಡಿಸೋಜಾ ಪ್ರಶ್ನಿಸಿದರು.

Dr.Ivan D’Souza ಚುನಾವಣೆಯಲ್ಲಿ ಸೋಲಿನ ಭಯದಿಂದ ಪ್ರಧಾನಿ ಮಾತಾಡಿದ್ದಾರೆ. ರಾಜ್ಯದಲ್ಲಿ ಮುಸ್ಲೀಂರಿಗೆ 4% ಮೀಸಲಾತಿ ನೀಡಲಾಗಿತ್ತು. ಬಿಜೆಪಿ ರಾಜ್ಯದಲ್ಲಿತ್ತು.‌ ಬದಲಾಯಿಸಲಾಗಿಲ್ಲ. ಬೊಮ್ಮಾಯೊ ಸರ್ಕಾರ ಕೊನೆ ಹಂತದಲ್ಲಿ ಮುಸ್ಲೀಂ ಸಮುದಾಯದ 4% ಮೀಸಲಾತಿ ತೆಗೆದು ಬೇರೆ ಸಮುದಾಯಕ್ಕೆ ನೀಡಿತು ಎಂದರು.

ನ್ಯಾಯಾಲಯವು ಈ ಮೀಸಲಾತಿಯನ್ನು ಪುರಸ್ಕರಿಸಿಲ್ಲ. ಇಷ್ಟಾದರೂ ಪ್ರಧಾನಿಯವರು ಕಾಂಗ್ರೆಸ್ ಮುಸ್ಲೀಂರಿಗೆ ಈ ದೇಶದ ಆಸ್ತಿ ನೀಡಲು ಮುಂದಾಗಿರುವುದು ಎಷ್ಟು ಸರಿ ಎಂದು ದೂರಿದರು. ಈ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಜ್ಯದಲ್ಲಿ ನಡೆದ 14 ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗಿಂತ ಉತ್ತಮ ಸ್ಥಿತಿಯಲ್ಲಿದೆ ಎಂದರು.

ಗ್ಯಾರೆಂಟಿಗಳು ರಾಜ್ಯದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಬಲ ತಂದು ಕೊಡಲಿದೆ. ಶಿವಮೊಗ್ಗದಲ್ಲಿ ಮತದಾರರನ್ನು ಭೇಟಿಯಾಗಿದ್ದೇನೆ. ಗೀತಾ ಶಿವರಾಜ್ ಕುಮಾರ್ ಪರ ಹೆಚ್ಚಿನ ಒಲವಿದೆ. ಗೆಲ್ಲಲಿದ್ದಾರೆ. 20 ಸ್ಥಾನವನ್ನು ಪಕ್ಷ ಗೆದ್ದು ಬೀಗಲಿದೆ. ದೇಶದಲ್ಲಿ ಮೋದಿ ಅಲೆ ಇಲ್ಲ ಎಂದರು‌.

ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ವಿಡಿಯೋಗಳು ವೈರಲ್ ಕುರಿತು SIT ಗೆ ನೀಡಲಾಗಿದೆ. ಅವರು ವಿದೇಶಕ್ಕೆ ಹೋಗಿರುವ ಮಾಹಿತಿ ಇದೆ ಅಪರಾಧ ಸಾಬೀತಾದರೆ ಅವರನ್ನ ಬಂಧಿಸುವ ಕ್ರಮ ಕೈಗೊಳ್ಳಲು ಕಾನೂನಿಗೆ ಅಧಿಕಾರವಿದೆ ಎಂದರು.‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...