Wednesday, February 4, 2026
Wednesday, February 4, 2026

Santosh lad ಆರೋಪಿ ಪ್ರಜ್ವಲ್ ದೇಶ ತೊರೆಯದಂತೆ ತಡೆಯುವಲ್ಲಿ ಕೇಂದ್ರ ಸರ್ಕಾರ ಏಕೆ ವಿಫಲ?- ಸಚಿವ ಸಂತೋಷ್ ಲಾಡ್

Date:

Santosh lad ಆರೋಪಿ ಪ್ರಜ್ವಲ್ ದೇಶ ತೊರೆಯದಂತೆ ತಡೆಯುವಲ್ಲಿ ಕೇಂದ್ರ ಸರ್ಕಾರ ಏಕೆ ವಿಫಲ?- ಸಚಿವ ಸಂತೋಷ್ ಲಾಡ್ನೂ ರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋಗಳು ಬಹಿರಂಗವಾದ ಬೆನ್ನಲ್ಲೇ ವಿದೇಶಕ್ಕೆ ಹಾರಿರುವ ಜೆಡಿಎಸ್ ಸಂಸದ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ದೇಶ ತೊರೆಯದಂತೆ ತಡೆಯುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏಕೆ ವಿಫಲವಾಯಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಪ್ರಚಾರಕ್ಕಾಗಿ ಇಂದು ಶಿವಮೊಗ್ಗಕ್ಕೆ ಆಗಮಿಸಿದ್ದ ಸಂತೋಷ್ ಲಾಡ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಯಾವುದೇ ವಿಳಂಬ ಮಾಡಿಲ್ಲ ಎಂದರು.

Santosh lad ಆರೋಪಿ ಪ್ರಜ್ವಲ್ ದೇಶ ತೊರೆಯದಂತೆ ತಡೆಯುವಲ್ಲಿ ಕೇಂದ್ರ ಸರ್ಕಾರ ಏಕೆ ವಿಫಲ?- ಸಚಿವ ಸಂತೋಷ್ ಲಾಡ್ಯಾ ವುದೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ಅವರ ವಿರುದ್ಧ ದೂರು ದಾಖಲಿಸಬೇಕು. ದೂರು ದಾಖಲಾದ ಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ಪ್ರಜ್ವಲ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಬಹುದಿತ್ತು. ಏರ್‌ಪೋರ್ಟ್‌ಗಳನ್ನು ಮ್ಯಾನೇಜ್‌ ಮಡ್ತಿರೋದ್ಯಾರು? ಪ್ರಜ್ವಲ್ ದೇಶದಿಂದ ಹಾರುವುದನ್ನು ಕೇಂದ್ರ ಏಕೆ ತಡೆಯಲಿಲ್ಲ? ಆರೋಪಿಯನ್ನು ಬಂಧಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ನನಗೆ ತಿಳಿದಿಲ್ಲ. ಆದರೆ, ನಮ್ಮ ಸರ್ಕಾರ ಎಸ್‌ಐಟಿ ರಚನೆಯಾಗುತ್ತಿದ್ದಂತೆ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...