Wednesday, October 2, 2024
Wednesday, October 2, 2024

Lok sabha Election ನರೇಂದ್ರ ಮೋದಿ ಬಂದು ಹತ್ತು ವರ್ಷವಾಗಿವೆ, ಯಾವ ಅಭಿವೃದ್ದಿ ಮಾಡಿದ್ದಾರೆ?- ಮಂಜುನಾಥ ಭಂಡಾರಿ

Date:

Lok sabha Election ರಾಷ್ಟ್ರದ 140 ಕೋಟಿ ಜನರನ್ನು ಪ್ರತಿನಿಧಿಸುವ ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ 800 ವರ್ಷಗಳ ಹಿಂದಿನ ತುಘಲಕ್ ದರ್ಬಾರಿನ ಆಡಳಿತವನ್ನು ನೆನಪಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.
ಸೊರಬ ಪಟ್ಟಣದ ಬಂಗಾರಧಾಮದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಅವರು ಮಾತನಾಡಿದರು.
Lok sabha Election ಕಾಂಗ್ರೆಸ್ 60 ವರ್ಷಗಳ ಆಡಳಿತದಲ್ಲಿ ಭ್ರಷ್ಟರನ್ನು ಕಟ್ಟಿಕೊಂಡು ಅಧಿಕಾರ ನಡೆಸಿದ ಎಂದು ಆರೋಪಿಸಿ ಬಿಜೆಪಿಗೆ ಕೇವಲ 60 ತಿಂಗಳು ಅಧಿಕಾರ ನೀಡಿ. ರಾಷ್ಟ್ರವನ್ನು ಬಲಿಷ್ಟವಾಗಿ ಕಟ್ಟುತ್ತೇನೆ. ಅಭಿವೃದ್ಧಿಯ ಮಹಾಪೂರವನ್ನೇ ಹರಿಸುತ್ತೇನೆ. ಭ್ರಷ್ಟತೆಯನ್ನು ತೊಲಗಿಸುತ್ತೇನೆ. ಮತ್ತು ದೇಶದಲ್ಲಿನ ಕಪ್ಪು ಹಣವನ್ನು ತಂದು ಬಡವರಿಗೆ ಹಂಚುತ್ತೇನೆ ಎಂದು ಜನತೆ ಎದುರು ವಾಗ್ದಾನ ಮಾಡಿದ್ದ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 10 ವರ್ಷಗಳು ಕಳೆದಿವೆ. ಆದರೆ ಯಾವ ಅಭಿವೃದ್ಧಿ ಮಾಡಿದ್ದಾರೆ. ಪೆಟ್ರೋಲ್, ಸಿಲಿಂಡರ್ ಬೆಲೆ ಏರಿಕೆಯಾಗಿದೆ. ವಶಪಡಿಸಿಕೊಂಡು ಕಪ್ಪು ಹಣ ಎಲ್ಲಿದೆ ಎನ್ನುವ ಲೆಕ್ಕ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ದೇಶದ ಜನರಲ್ಲಿ ಮತೀಯ ಭಾವನೆಗಳನ್ನು ಕೆರಳಿಸಿ, ಮನುಷ್ಯ ಸಂಬಂಧಗಳ ನಡುವೆ ದ್ವೇಷದ ಕಿಚ್ಚು ಹೆಚ್ಚುವ ಮೂಲಕ ಮತದಾರರ ಗಮನ ಬೇರೆಡೆಗೆ ಸೆಳೆಯುವಂತೆ ಮಾಡುತ್ತಿದ್ದಾರೆ. 60 ತಿಂಗಳಿನಲ್ಲಿ ದೇಶದ ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದವರು 2047ಕ್ಕೆ ದೇಶ ವಿಕಾಸ ಮಾಡುತ್ತೇನೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಲೇವಡಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...