Saturday, December 6, 2025
Saturday, December 6, 2025

Valmiki Community ವಾಲ್ಮೀಕಿ ಸಮುದಾಯದಿಂದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ

Date:

Valmiki Community ಕರ್ನಾಟಕ ರಾಜ್ಯದ ವಾಲ್ಮೀಕಿ ಸಮುದಾಯ, ಪರಿಶಿಷ್ಟ ಪಂಗಡವು ಹೆಚ್ಚು ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲೂ ಕೂಡ ವಾಲ್ಮೀಕಿ ಸಮುದಾಯದ ಅಪಾರ ಮತಗಳಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಇಡೀ ಸಮುದಾಯ ಹೆಚ್ಚಿನ ಮತ ನೀಡಿ ಗೆಲ್ಲಿಸಲಿದೆ ಎಂದು ಕೆ ಪಿ ಸಿ ಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಾಧ್ಯಕ್ಷ ವಿಜಯ ನಾಯಕ್ ಎಂ. ಅವರು ತಿಳಿಸಿದರು.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ವಾಲ್ಮೀಕಿ ಸಮುದಾಯದವರಿಗೆ ವಿಶೇಷವಾಗಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚಿನ ಸ್ಥಾನ ನೀಡಿದೆ. ಸರ್ಕಾರದಲ್ಲಿ ಮೂವರು ಮಂತ್ರಿಗಳನ್ನು ಮಾಡಿದೆ ನಿಗಮ ಮಂಡಳಿಗಳಿಗೆ ಹೆಚ್ಚಿನ ಆಧ್ಯತೆ ನೀಡಿದೆ. ವಾಲ್ಮೀಕಿ ಸಮುದಾಯಕ್ಕೋಸ್ಕರ ಸಚಿವಾಲಯವನ್ನು ಮಾಡಿಕೊಟ್ಟಿದೆ ಎಂದು ಅವರು ತಿಳಿಸಿದರು.

Valmiki Community ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲೂ ಕೂಡ ವಿಧಾನಸಭಾ ಪ್ರಾಂಗಣದಲ್ಲಿ ಎರಡು ಎಕರೆ ಜಾಗ ಮೀಸಲಿಟ್ಟು ವಾಲ್ಮೀಕಿ ಪ್ರತಿಮೆ ನಿರ್ಮಾಣ ಮಾಡಿದ್ದು, ವಿಶೇಷವಾಗಿ ಬಗರ್ ಹುಕುಂ ಸಾಗುವಳಿದಾರರಿಗೆ ಅತಿ ಹೆಚ್ಚಿನ ಸಾಗುವಳಿ ಪತ್ರ ನೀಡಿದೆ. ಅಂತೆಯೇ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎರಡು ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಒಂದು ಸಾಮಾನ್ಯ ಕ್ಷೇತ್ರ ಸೇರಿ ಮೂರು ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ವಾಲ್ಮೀಕಿ ಸಮುದಾಯದ ಪರ ಕಾಂಗ್ರೆಸ್ ಪಕ್ಷ ಇದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...