ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿರುವ ನಗರಗಳನ್ನು ಪಟ್ಟಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ವಸತಿ ಮತ್ತು ನಗರ ಅಭಿವೃದ್ಧಿ ವ್ಯವಹಾರಗಳ ಸಚಿವಾಲಯಕ್ಕೆ ಸಲಹೆ ನೀಡಿದ್ದಾರೆ.
ವಾರಣಾಸಿಯಲ್ಲಿ ನಡೆದ ಅಖಿಲ ಭಾರತ ನಿಯರ್ ಗಳ ಸಮಾವೇಶ ನಡೆಯಿತು. ವಿಡಿಯೋ ಕಾನ್ಫರೆನ್ಸ್ ಮೂಲಕ ಮಾನ್ಯ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
“ಹಲವು ನಗರಗಳು ಸ್ವಚ್ಛತೆಯಿಂದ ವಿಮುಖವಾಗಿವೆ. ಈ ವಿಚಾರದಲ್ಲಿ ಜಾಣಕುರುಡುತನ ಪ್ರದರ್ಶಿಸುತ್ತಿವೆ. ಆದ್ದರಿಂದ ಅಂತಹ ನಗರಗಳನ್ನು ಪಟ್ಟಿ ಮಾಡಿ, ಜನರಿಗೆ ತಿಳಿಸಬೇಕು. ಆ ಮೂಲಕ ಆಯಾ ನಗರಗಳ ಅಧಿಕಾರಿಗಳ ಮೇಲೆ ಸಾರ್ವಜನಿಕ ಒತ್ತಡ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಸ್ವಚ್ಛತೆ ವಿಚಾರದಲ್ಲಿ ಗಂಭೀರವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕು ಎಂದು ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ ಸುಮಾರು 120 ಮೇಯರ್ ಗಳು ಭಾಗವಹಿಸಿದ್ದರು. ಸ್ವಚ್ಛತೆ ಅಭಿಯಾನದ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಆಯೋಜಿಸುವ ಸ್ಪರ್ಧೆಗಳಲ್ಲಿ ನಿಮ್ಮ ನಗರಗಳು ಹಿಂದುಳಿಯದಂತೆ ನೋಡಿಕೊಳ್ಳಿ. ಸ್ವಚ್ಛತೆ ಅಭಿಯಾನವು ವರ್ಷದಲ್ಲಿ ಒಮ್ಮೆ ಮಾತ್ರ ಆಯೋಜಿಸುವ ಅಭಿಯಾನ ವಾಗಬಾರದು ವಾರ್ಡ್ಗಳಲ್ಲಿ ಸಹ ಸ್ವಚ್ಛತೆ ಕುರಿತು ಜಾಗೃತಿ ನೀಡಬೇಕು. ವಾರ್ಡ್ ಗಳ ಮಟ್ಟದ ಸ್ಪರ್ಧೆ ಆಯೋಜಿಸಬೇಕು ಆ ಮೂಲಕ ಸ್ಥಳೀಯವಾಗಿಯೂ ಸ್ವಚ್ಛತೆ, ನಗರಗಳ ಸೌಂದರ್ಯ ಹೆಚ್ಚಿಸುವ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಮೇಯರ್ ಗಳು ನಗರಗಳ ಸಂಸ್ಥಾಪನ ದಿನವನ್ನು ಗುರುತಿಸಿ ಕಾರ್ಯಕ್ರಮ ಆಯೋಜಿಸಬೇಕು. ಆಯಾ ನಗರಗಳಲ್ಲಿರುವ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ತಂಡಗಳನ್ನು ರಚಿಸಬೇಕು. ಗಣ್ಯರ ಮೂರ್ತಿಗಳನ್ನು ಸ್ವಚ್ಛಗೊಳಿಸುವ ಜೊತೆಗೆ ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಗಣ್ಯರ ಕುರಿತು ಭಾಷಣ ಸ್ಪರ್ಧೆ ಆಯೋಜಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.