Friday, March 20, 2026
Friday, March 20, 2026

Devaraje Gowda ಪ್ರಜ್ವಲ್ ‌ಪೆನ್ ಡ್ರೈವ್ ಪ್ರಕರಣ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡರಬಂಧನ

Date:

Devaraje Gowda ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ವಕೀಲ ಜಿ ದೇವರಾಜೇಗೌಡ ಅವರನ್ನು ಬಂಧಿಸಲಾಗಿದೆ.
ಪೆನ್ ಡ್ರೈವ್‌ನಲ್ಲಿದ್ದ ಸ್ಪಷ್ಟ ವೀಡಿಯೊವನ್ನು ಸೋರಿಕೆ ಮಾಡಿದ ಆರೋಪ ಮತ್ತು ಮಹಿಳೆಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ದೇವರಾಜೇಗೌಡನನ್ನು ಬಂಧಿಸಲಾಗಿದೆ. ಹಿರಿಯೂರು ತಾಲ್ಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಇನೋವಾ ಕಾರಿನಲ್ಲಿ ಬರುತ್ತಿದ್ದಾಗ ಶುಕ್ರವಾರ ರಾತ್ರಿ ಹಿರಿಯೂರು ಗ್ರಾಮಾಂತರ ಪೊಲೀಸರು ದೇವರಾಜೇಗೌಡನನ್ನು ಬಂಧಿಸಿದ್ದಾರೆ.
ದೇವರಾಜೇಗೌಡ ನಿವೇಶನವನ್ನು ಮಾರಾಟ ಮಾಡಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎ.1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಆತನ ವಿರುದ್ಧವು ಪ್ರಕರಣ ದಾಖಲಾಗಿತ್ತು.

Devaraje Gowda ದೇವರಾಜೇಗೌಡ ಯಾರು?
ಬಿಜೆಪಿ ನಾಯಕ ಮತ್ತು ವೃತ್ತಿಯಲ್ಲಿ ವಕೀಲರಾಗಿರುವ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಸಿದ್ದರು. ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡರೆ ಪ್ರಭಾವ ಬೀರುವ ಸಾಧ್ಯತೆ ಬಗ್ಗೆ ಹೇಳಿಕೊಂಡಿದ್ದರು ಎನ್ನಲಾಗಿದೆ. ಆದರೆ, ಗೌಡರು ತಮಗೆ ವಿಡಿಯೊಗಳ ಕುರಿತ ಪತ್ರವನ್ನು ಕಳುಹಿಸಿದ್ದಾರೆ ಎಂಬುದಾಗಿ ಹೇಳಿರುವುದು ಸುಳ್ಳು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ugadi ನಮ್ಮೂರಿನ ಯುಗಾದಿ.ಒಂದು ನೆನಪು…ಲೇ: ಎನ್.ಎಸ್.ಕುಮಾರ್.ನಿವೃತ್ತ ನಿರ್ದೇಶಕರು.( ಶಿಕ್ಷಣ ಇಲಾಖೆ).ಶಿವಮೊಗ್ಗ

Ugadi ಹಬ್ಬ ಎಂದರೆ ಎಲ್ಲರಿಗೂ ಸಡಗರ ಸಂಭ್ರಮ ಅದರಲ್ಲೂ ನಮ್ಮೂರಿನ ಹಬ್ಬದ...

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...