ಸಾಗರದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆನಂದಪುರಂ ಭಾಗಕ್ಕೆ ನೂತನ 108 ಆಂಬುಲೆನ್ಸ್ ವಾಹನ ಹಾಗೂ ತುಮರಿ ಭಾಗಕ್ಕೆ ದುರಸ್ತಿಯಾದ ಆಂಬುಲೆನ್ಸ್ ಸೌಲಭ್ಯಕ್ಕೆ ಎಂ ಎಸ್ ಐ ಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ಅವರು ಚಾಲನೆ ನೀಡಿದ್ದಾರೆ.
ಹಿನ್ನೀರು ಭಾಗದಲ್ಲಿ ಸಮರ್ಪಕವಾದ ಆರೋಗ್ಯ ಸೇವೆ ಸಲ್ಲಿಸಲು ಸರ್ಕಾರ ಬದ್ಧವಾಗಿದೆ. ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ಸಿಗದೇ ಜೀವಹಾನಿಯ ಘಟನೆಗಳು ಮರುಕಳಿಸಬಾರದು ಎಂದು ಎಚ್. ಹಾಲಪ್ಪ ಅವರು ತಿಳಿಸಿದ್ದಾರೆ.
ಕರೂರು ಭಾರಂಗಿ ಹೋಬಳಿಯ ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಟೆಲಿಕಾಂ ಸಂಸ್ಥೆಗಳ ಜೊತೆಗೆ ಮಾತುಕತೆ ನಡೆಸಲಾಗಿದೆ. ಸಂಸದರು ಹಾಗೂ ಶಾಸಕರ ನಿಧಿಯಿಂದ ಶಾಲೆಗಳಿಗೆ ನೆಟ್ವರ್ಕ್ ಕಲ್ಪಿಸುವ ಯೋಜನೆ ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಲಿದೆ. ಹಿನ್ನೀರಿನ ವ್ಯಾಪ್ತಿಯಲ್ಲಿನ ಸಮಸ್ಯೆಗಳನ್ನ ಗಮನದಲ್ಲಿದೆ. ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕೂಡ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.