Thursday, August 6, 2026
Thursday, August 6, 2026

Death News ಸಾಲ ವಸೂಲಿಗಾರರ ಗಲಾಟೆ ಸಹಿಸದೇ ಸಾಲ ಪಡೆದ ಮಹಿಳೆ ಆತ್ಮಹತ್ಯೆ

Date:

Death News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆ.
ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ಮನೆ ಕಟ್ಟಿದ್ದರು.

ಬ್ಯಾಂಕ್‌ ಸಾಲ ಸಾಲದಾಗದೆ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ ಸಾಲ ಪಡೆದಿದ್ದರು. ಈಚೆಗೆ ರಂಗನಾಥ್‌ ನಡೆಸುತ್ತಿದ್ದ ಪಾನಿಪೂರಿ ವ್ಯಾಪಾರ ಕುಂಠಿತವಾಗಿತ್ತು. ಇದರಿಂದ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಈ ವೇಳೆ ಬಡ್ಡಿಗೆ ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರು.

Death News ಮನನೊಂದಿದ್ದ ಶೋಭಾ ಅವರು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ರಂಗನಾಥ್‌ ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳಿದಾಗ ಶೋಭಾ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ. ಕೂಡಲೆ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆದರೆ ಶೋಭಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...