Tuesday, October 1, 2024
Tuesday, October 1, 2024

Dr. RC Jagdish ಸುಸ್ಥಿರ ಜೀವನಕ್ಕಾಗಿ ಸೂಕ್ತ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ-ಡಾ.ಆರ್.ಸಿ.ಜಗದೀಶ್

Date:

Dr. RC Jagdish ಶಿವಮೊಗ್ಗ ಕೃಷಿ ವಿವಿಯು ವಿಶ್ವವಿದ್ಯಾಲಯವು ೪ ಲಕ್ಷ ರೈತರಿಗೆ ಕೃಷಿ ಹಾಗೂ ಕೃಷಿಯೇತರ ತಂತ್ರಜ್ಞಾನಗಳನ್ನು ತಲುಪಿಸುವ ಗುರಿ ಹೊಂದಿದೆ. ಬೇಕರಿ ಮತ್ತು ಅಣಬೆ ಉದ್ಯಮಗಳು ಸ್ವ ಉದ್ಯೋಗವನ್ನು ಸೃಷ್ಟಿಸುತ್ತಿದೆ. ಗ್ರಾಹಕರ ಬೇಡಿಕೆಗೆ ತಕ್ಕಂತಹ ಆಹಾರಗಳನ್ನು ಪೂರೈಸಲು ಹಾಗೂ ಸುಸ್ಥಿರ ಜೀವನಕ್ಕಾಗಿ ಸೂಕ್ತ ಕೌಶಲ್ಯಾಭಿವೃದ್ಧಿ ತರಬೇತಿಯು ಅತ್ಯಗತ್ಯವಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್ ಹೇಳಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮಹಾವಿದ್ಯಾಲಯ ಮತ್ತು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಬೇಕರಿ ಹಾಗೂ ಕನ್ಫೆಕ್ಷನರೀಸ್ ಮತ್ತು ಹೈಟೆಕ್ ಅಣಬೆ ಬೇಸಾಯ ಕುರಿತ ೧೦ ದಿನಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಪರ್ಕದೊಂದಿಗೆ ರೈತ ಮತ್ತು ರೈತ ಮಹಿಳೆಯರು ಯಶಸ್ವಿ ಉದ್ಯಮಿಗಳು ಆಗಬಹುದು ಎಂದರು.
ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಬೇಕು. ಅಣಬೆ ಸ್ವ ಉದ್ಯೋಗದ ಬಗ್ಗೆ, ಮೌಲ್ಯವರ್ಧನೆಯ ಬಗ್ಗೆ ಯುವಕ ಯುವತಿಯರಲ್ಲಿ ಜ್ಞಾನವನ್ನು ಹೆಚ್ಚಿಸುವುದರೊಂದಿಗೆ, ಸ್ವ-ಉದ್ಯೋಗ ಪ್ರಾರಂಭಿಸಲು ದೊರೆಯುವ ಹಣಕಾಸಿನ ಸೌಲಭ್ಯಗಳು, ಖರ್ಚು-ವೆಚ್ಚಗಳ ನಿರ್ವಹಣೆ, ಮಾರುಕಟ್ಟೆಯ ಮಾರ್ಗಗಳ ಬಗ್ಗೆ ತರಬೇತಿಯಲ್ಲಿ ಶಿಬಿರಾರ್ಥಿಗಳು ಆಸಕ್ತಿಯಿಂದ ಕಲಿಯಬೇಕು ಮತ್ತು ತರಬೇತಿಯನ್ನು ಪಡೆದ ನಂತರ ಇತರರಿಗೂ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಬಹುದು ಎಂದರು.
ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ. ಬಿ. ಹೇಮ್ಲಾ ನಾಯ್ಕ್ ಮಾತನಾಡಿ, ರೈತರಿಗೆ, ಮುಖ್ಯವಾಗಿ ಯುವಕ ಯುವತಿಯರಿಗೆ ಬದುಕು ಕಟ್ಟಿಕೊಳ್ಳಲು ತರಬೇತಿ ಶಿಬಿರಗಳು ಉಪಯುಕ್ತವಾಗಲಿದೆ. ಆರೋಗ್ಯಕರ ತಿಂಡಿ ತಿನಿಸುಗಳನ್ನು ಮಾಡಲು ಬೇಕರಿ ಉದ್ಯಮ ಮತ್ತು ಅಪೌಷ್ಟಿಕತೆಯನ್ನು ನಿರ್ವಹಣೆ ಮಾಡುವಲ್ಲಿ ಅಣಬೆ ಬೇಸಾಯ ಉದ್ಯಮಗಳು ಬಹಳ ಪ್ರಾಮುಖ್ಯತೆ ಹೊಂದಿದೆ. ಪೂರಕ ಮಾರುಕಟ್ಟೆ
Dr. RC Jagdish ಕೃಷಿ ವಿಸ್ತರಣಾ ನಿರ್ದೇಶಕ ಡಾ. ಕೆ. ಟಿ. ಗುರುಮೂರ್ತಿ ಮಾತನಾಡಿ, ಶುಲ್ಕ ಸಹಿತ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವುದು ವಿಶ್ವವಿದ್ಯಾಲಯದ ಹಲವು ವರ್ಷಗಳ ಪರಿಶ್ರಮವಾಗಿದೆ. ಹಾಗಾಗಿ ಈ ತರಬೇತಿಯಿಂದ ಸಿಗುವ ಮಾಹಿತಿಯನ್ನು ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟದ ಉದ್ಯಮಶೀಲರಾಗಿ ಎಂದರು.
ಸ್ನಾತಕೋತ್ತರ ವಿಭಾಗದ ಡೀನ್ ಡಾ. ಎಂ. ದಿನೇಶ್ ಕುಮಾರ್, ಆಯೋಜಕ ಡಾ. ನಂದೀಶ್ ಎಂ. ಎಸ್, ಡಾ. ಸುಧಾರಾಣಿ, ಡಾ. ಜಿ. ಕೆ. ಗಿರಿಜೇಶ್ ವಿವಿಧ ತಾಲೂಕುಗಳಿಂದ ಆಗಮಿಸಿದ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...