Thursday, June 18, 2026
Thursday, June 18, 2026

HD Kumaraswamy ಕಾಂಗ್ರೆಸ್ ಸರ್ಕಾರಕ್ಕೆ ಸತ್ಯಾಂಶ ಬೇಕಿಲ್ಲ. ಜೆಡಿಎಸ್& ದೇವೇಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಬೇಕಿತ್ತು-‌ಕುಮಾರಸ್ವಾಮಿ

Date:

HD Kumaraswamy ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿದ್ದಾಗಲೇ ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ಹಾಗಾಗಿರುವಾಗ ವಿದೇಶದಲ್ಲಿರುವ ಅವರು ನಮ್ಮ ಸಂಪರ್ಕಕ್ಕೆ ಸಿಗುವರೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸತ್ಯಾಂಶ ಬೇಕಾಗಿಲ್ಲ, ಜೆಡಿಎಸ್ ಹಾಗೂ ದೇವೇಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಬೇಕಾಗಿತ್ತು.

ಹಾಗಾಗಿ ಎಸ್.ಐ.ಟಿ.ಮೂಲಕ ಅನಾವಶ್ಯಕವಾಗಿ ಕೆಲವರನ್ನು ತನಿಖೆ ಮಾಡಿ ಹಿಂಸೆ ನೀಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ʼಎಸ್.ಐ.ಟಿ. ತನಿಖೆ ಪ್ರಾಮಾಣಿಕವಾಗಿ ತನಿಖೆ ನಡೆಸುತ್ತಿಲ್ಲ. ವಕೀಲ ದೇವೇರಾಜೇಗೌಡರನ್ನು ಬಂಧಿಸಿ, ಅವರಿಂದ ಪ್ರಕರಣ ದ ಬಗ್ಗೆ ಮಾಹಿತಿ ಪಡೆಯುವ ಬದಲು ಆಡಿಯೋ ಕ್ಲಿಪಿಂಗ್ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಕರಣದಲ್ಲಿ ರಾಜ್ಯ ಸರ್ಕಾರ ಬಿದ್ದು ಹೋಗುವ ಭಯ ಕಾಂಗ್ರೆಸ್‌ ನಾಯಕರಿಗೆ ಕಾಡುತ್ತಿದೆ. ಹಾಗಾಗಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಸ್.ಐ.ಟಿ.ಯಿಂದ ತನಿಖೆ ನಡೆಸುತ್ತಿದ್ದಾರೆʼ ಎಂದು ಹೇಳಿದರು.

HD Kumaraswamy “ತನಿಖೆಯ ಇಂಚಿಚೂ ವರದಿ ಗೃಹ ಸಚಿವರಿಗೆ ಹೋಗುತ್ತಿಲ್ಲ. ಬದಲಾಗಿ ಮಂಡ್ಯದ ಶಾಸಕರಿಗೆ ಹೋಗುತ್ತಿದೆ. ಹಾಗಾಗಿ ಆ ಶಾಸಕರು ವಾರದೊಳಗೆ ದೊಡ್ಡ ತಿಮಿಂಗಿಲ ಬಯಲಿಗೆ ಬರುತ್ತದೆ. ಅವರನ್ನು ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಗೃಹ ಸಚಿವರು ತಮ್ಮ ಪಕ್ಕದಲ್ಲೇ ದೊಡ್ಡ ತಿಮಿಂಗಿಲವನ್ನು ಕೂರಿಸಿಕೊಂಡಿದ್ದಾರೆ. ಅವರನ್ನು ಹಿಡಿದು ತನಿಖೆ ಮಾಡಿದರೆ ಸತ್ಯ ಹೊರಬರಲಿದೆ” ಎಂದು ನುಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...