Anandapura Police ಆನಂದಪುರ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಗ್ರಾಮದ ಹರೀಶ್ (30) ಮೃತಪಟ್ಟವನು.
ಹರೀಶ್ ಮಧ್ಯಾಹ್ನ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಸ್ನೇಹಿತರೊಂದಿಗೆ ತಿರುಪತಿಗೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್ ಗ್ರೌಂಡಿಂಗ್ ಆಗಿರುವುದನ್ನು ಗಮನಿಸದೇ ಬಟ್ಟೆ ಒಣಗಿಸಲು ಹೋಗಿ ಮೃತಪಟ್ಟಿದ್ದಾನೆ.
Anandapura Police ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನಂದಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.