ಕರ್ನಾಟಕದಲ್ಲಿ ಮಳೆಯ ಪ್ರಮಾಣ ತಗ್ಗಿದ ಹಿನ್ನಲೆಯಲ್ಲಿ ಚಳಿ ಹೆಚ್ಚಾಗುತ್ತಿದೆ. ಉತ್ತರದ ಶೀತ ಮಾರುತಗಳು ರಾಜ್ಯವನ್ನು ಪ್ರವೇಶಿಸಿದ್ದು ಚಳಿಗಾಲದ ಆರಂಭಕ್ಕೆ ಮುನ್ನುಡಿ ಬರೆದಿವೆ.
ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲ್ಬುರ್ಗಿ, ಯಾದಗಿರಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಅಧಿಕವಾಗಿದೆ. ಇದು ರಾಜ್ಯದ ಚಳಿಗಾಲದ ಮುನ್ಸೂಚನೆಯಾಗಿದೆ ಇಂದು ಹವಾಮಾನ ತಜ್ಞರಾದ ಡಾ. ಜಿ. ಎಸ್. ಶ್ರೀನಿವಾಸ್ ರೆಡ್ಡಿ ಅವರು ತಿಳಿಸಿದ್ದಾರೆ.
ಮುಂದಿನ ಎರಡು ಮೂರು ದಿನಗಳ ಒಳಗೆ ಶೀತ ಮಾರುತಗಳು ರಾಜ್ಯದ್ಯಂತ ಆವರಿಸಿಕೊಳ್ಳುತ್ತದೆ. ಆ ಮೂಲಕ ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಚಳಿ ಹೆಚ್ಚಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಮುಂದಿನ 24ಗಂಟೆಯಲ್ಲಿ ಒಣಹವೆ ಮುಂದುವರಿಯುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.