Thursday, June 18, 2026
Thursday, June 18, 2026

Madhu Bangarappa ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿ- ಮಧು ಬಂಗಾರಪ್ಪ

Date:

Madhu Bangarappa ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನೆಡೆಯುವ ವಿಧಾನ ಪರಿಷತ್ ಚುನಾವಣೆಯ “ಪೂರ್ವಭಾವಿ ಸಭೆ”ಯನ್ನುದ್ದೇಶಿಸಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿದರು.

ಜೂನ್ 3 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಆಯನೂರು ಮಂಜುನಾಥ್ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಡಾ.ಕೆ.ಕೆ ಮಂಜುನಾಥ್ ಅವರು ಸ್ಪರ್ಧಿಸಿದ್ದು, ತಾವೆಲ್ಲರೂ ತಮ್ಮ ಅಮೂಲ್ಯ ಮತವನ್ನು ನೀಡುವ ಮೂಲಕ ವಿಧಾನಪರಿಷತ್ ಗೆ ಆಯ್ಕೆ ಮಾಡುವುದರ ಜೊತೆಗೆ ತಮ್ಮ ಸಂಬಂಧಿಕರು, ಸ್ನೇಹಿತರಿಂದಲೂ ಮತ ಕೊಡಿಸಿ ಗೆಲ್ಲಿಸುವಂತೆ ಮನವಿ ಮಾಡಿದರು.

Madhu Bangarappa ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಶ್ರೀ ಮಯೂರ್ ಜಯಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಭಂಡಾರಿ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಜಿಲ್ಲಾಧ್ಯಕ್ಷರಾದ ಶ್ರೀ ಆರ್. ಪ್ರಸನ್ನ ಕುಮಾರ್, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಶ್ರೀ ಆಯನೂರು ಮಂಜುನಾಥ್, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶ್ರೀ ಡಾ.ಕೆ.ಕೆ ಮಂಜುನಾಥ್ ಕುಮಾರ್, ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು, ಎಂಎಡಿಬಿ ಅಧ್ಯಕ್ಷರಾದ ಶ್ರೀ ಆರ್.ಎಂ ಮಂಜುನಾಥಗೌಡ್ರು, ಸೂಡಾ ಅಧ್ಯಕ್ಷರಾದ ಶ್ರೀ ಹೆಚ್.ಎಸ್ ಸುಂದರೇಶ್, ಭೋವಿ ನಿಗಮದ ಅಧ್ಯಕ್ಷರಾದ ಶ್ರೀ ಎನ್.ರವಿ ಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಪಲ್ಲವಿ, ಮರಿಯಪ್ಪ, ಶ್ರೀನಿವಾಸ್ ಕರಿಯಣ್ಣ, ಹೆಚ್. ಸಿ ಯೋಗೇಶ್, ಬಲ್ಕಿಷ್ ಬಾನು ಸೇರಿದಂತೆ ಅನೇಕ ಮುಖಂಡರು-ಗಣ್ಯರು, ಎಲ್ಲ ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...