Monday, May 4, 2026
Monday, May 4, 2026

Gopal Krishna Belur ಸಾಗರ ಶಾಸಕರ ವಿಡಿಯೋಗೆ ತಪ್ಪು ಶೀರ್ಷಿಕೆ ನೀಡಿ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿ ವಿರುದ್ಧ ದೂರು ದಾಖಲು

Date:

Gopal Krishna Belur ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರೂ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ಕತ್ತಾಗಿ ವೈರಲ್ ಆಗಿತ್ತು.

ಅದೇ ವಿಡಿಯೋವನ್ನು ದುರುಪಯೋಗ ಪಡಿಸಿಕೊಂಡ ಅಪರಿಚಿತನೊಬ್ಬ ಜನಪ್ರಿಯ ಶಾಸಕ ಗೋಪಾಲಕೃಷ್ಣ ಬೇಳೂರುರ ವಿರುದ್ಧ ಇನಸ್ಟಾಗ್ರಾಂ ನಲ್ಲಿ ಆಪಪ್ರಚಾರ ಮಾಡುವ ಉದ್ದೇಶದಿಂದ ಆರೋಪಿಯು ಇನ್ಸ್ಟ್ರಾಗ್ರಾಮ್ ನಲ್ಲಿ”khadeema_congress” ಎಂಬ  ಖಾತೆಯಿಂದ ವೀಡಿಯೋ ಒಂದನ್ನು ಹರಿಬಿಟ್ಟಿದ್ದಾನೆ.

ಆರೋಪಿಯು  ಶಾಸಕರಿಗೆ ತೇಜೋವಧೆ ಮಾಡುವ ಮತ್ತು ಆಗೌರವವನ್ನು ತೋರಿಸುವ ಪ್ರಯತ್ನವನ್ನು ಮಾಡಿದ್ದಾನೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ “ಚಿನ್ಮಯ್ ಸಿ.ಎಂ” ರವರು ಸಾಗರ ಪೇಟೆ ಠಾಣೆಗೆ ದೂರು ನೀಡಿ ಆರೋಪಿಯ ಈ ಕೃತ್ಯವು  ಕಾನೂನುಬಾಹಿರವಾಗಿದ್ದು ಗೌರವಾನ್ವಿತ ಶಾಸಕರ ತೋಜೋವಧೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಆರೋಪಿಯ ವಿರುದ್ಧ ಕಾನೂನಿನ ಕಠಿಣ ಕ್ರಮಕ್ಕಾಗಿ ಒತ್ತಾಯಿಸಿ ದೂರನ್ನು ನೀಡಿದ್ದಾರೆ.

Gopal Krishna Belur ಇದೀಗ ಸಾಗರ ಪೇಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರನ್ನು ದಾಖಲಿಸಿಕೊಂಡ ಸಾಗರ ಪೇಟೆ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...