Monday, February 2, 2026
Monday, February 2, 2026

Shree Ranganatha Swami ಸೊರಬದಲ್ಲಿ ಶ್ರೀಕ್ಷೀರ ರುದ್ರೇಶ್ವರ ಸ್ವಾಮಿಯ ಅದ್ಧೂರಿ ಬ್ರಹ್ಮರಥೋತ್ಸವ

Date:

Shree Ranganatha Swami ಸೊರಬ ಪಟ್ಟಣದ ಪುರದೈವ ಶ್ರೀ ರಂಗನಾಥ ಸ್ವಾಮಿ (ಕ್ಷೀರ ರುದ್ರ ದೇವರ) ಬ್ರಹ್ಮ ರಥೋತ್ಸವ ಗುರುವಾರ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.

ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಅಭಿಷೇಕ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್ ಮರಾಠೆ ಅವರು ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು.

ತಹಶೀಲ್ದಾರ್ ಹುಸೇನ್ ಸರಕಾವಸ್ ರಥೋತ್ಸವಕ್ಕೆ ಚಾಲನೆ ನೀಡಿದರು.
ಭಕ್ತರು ಕಳಸಕ್ಕೆ ಬಾಳೆಹಣ್ಣು, ಉತ್ತುತ್ತಿ , ಕಾಳು ಮೆಣಸು ಬೀರುವ ಮೂಲ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ರಥವು ಶಿಥಿಲವಾಗಿರುವುದರಿಂದ ತಜ್ಞರ ಸಲಹೆ ಮೇರೆಗೆ ದೇವಸ್ಥಾನದ ಮುಂಭಾಗದ ಕೆಲವೇ ದೂರ ಮಾತ್ರ ರಥವನ್ನು ಎಳೆಯಲಾಯಿತು. ನೂತನ ರಥ ನಿರ್ಮಾಣವಾಗಬಹುದು, ಪೂರ್ಣ ಪ್ರಮಾಣದಲ್ಲಿ ರಥವನ್ನು ಎಳೆಯಬಹುದು ಎನ್ನುವ ಭಕ್ತರ ಆಶಾಭಾವನೆಗೆ ನಿರಾಸೆ ಉಂಟಾಯಿತು.

Shree Ranganatha Swami ಪೊಲೀಸ್ ಇಲಾಖೆಯಿಂದ ಬಂದೋ ಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಚಿಕ್ಕಪೇಟೆ ಮಾರ್ಗವಾಗಿ ಏಕ ಮುಖ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ರಥೋತ್ಸವದ ಅಂಗವಾಗಿ ಬ್ರಾಹ್ಮಣ ಸಮಾಜದಿಂದ ಸಮುದಾಯವರಿಗೆ ಮಾತ್ರ ಚಾಮರಾಜ ಪೇಟೆಯ ಗುರುಭವನದಲ್ಲಿ ಪ್ರತ್ಯೇಕವಾಗಿ ಭೋಜನ ವ್ಯವಸ್ಥೆ ಹಾಗೂ ಸಾರ್ವಜನಿಕರಿಂದ ಇತರೆ ಸಮುದಾಯದವರಿಗೆ ದೇವಸ್ಥಾನದ ಆವರಣದಲ್ಲಿ ಅನ್ನಸಂತರ್ಪಣೆ ನಡೆಸಲಾಯಿತು.

ಹಿರೇಶಕುನ ಗ್ರಾಮಸ್ಥರು ರಥ ಕಟ್ಟುವ ಕಾರ್ಯ ಹಾಗೂ ಹಳೇ ಸೊರಬ ಗ್ರಾಮಸ್ಥರು ಚಪ್ಪರ ಸೇವೆ, ಸೊಪ್ಪಿನ ಕೇರಿಯ ದೇವಾಂಗ ಸಮುದಾಯದವರು ಹಾಗೂ ಮಡಿವಾಳ ಸಮುದಾಯದವರು ಪೂಜಾ ಕಾರ್ಯ ಮತ್ತು ಪಲ್ಲಕ್ಕಿ ಉತ್ಸವಕ್ಕೆ ಸಹಕಾರ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...