Thursday, June 18, 2026
Thursday, June 18, 2026

Kumsi Police ಕೃಷಿ ಹೊಂಡದಲ್ಲಿ ಬಿದ್ದವನೂ ಪ್ರಾಣಬಿಟ್ಟ.ಉಳಿಸಲು ಹೋದವನೂ ಜೀವತೆತ್ತ

Date:

Kumsi Police ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೆನ್ನಳ್ಳಿ ಗ್ರಾಮದಲ್ಲಿ ಇಬ್ಬರು ಕೃಷಿ ಹೊಂಡಕ್ಕೆ ಬಿದ್ದು ಸಾವು ಕಂಡಿರುವ ಘಟನೆ ನಡೆದಿದೆ.

ಚೆನ್ನಳ್ಳಿಯಲ್ಲಿ ಕಾಲು ತೊಳೆಯಲು ಹೋದ ಒಬ್ಬ ಬಾಲಕನನ್ನ ರಕ್ಷಿಸಲು ಹೋದ ಯುವನೋರ್ವನು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮಾಲತೇಶ್(28) ಹಾಗೂ ಮಹೇಶ್ ಪುತ್ರ ಅಭಯ್ (16) ಸಾವಿಗೀಡಾದ ದುರ್ಧೈವಿಗಳಾಗಿದ್ದಾರೆ.

ಅಶೋಕ್ ಎಂಬುವರ ಜಮೀನಿನಲ್ಲಿದ್ದ 10 ಅಡಿ ಆಳದ ಕೃಷಿ ಹೊಂಡದಲ್ಲಿ ಕಾಲು ತೊಳೆಯಲು ಹೋದಾಗ ಘಟನೆ ಸಂಭವಿಸಿದೆ. ಮೃತ ಅಭಯ್ ಅವರ ಜಮೀನಿನಲ್ಲಿ ಟ್ರಾಕ್ಟರ್ ನಿಂದ ನೆಗಿಲು ಹೊಡೆಯಲು ಮಾಲ್ತೇಶ್ ಜೊತೆ ಹೋಗಿದ್ದನು.
ಮಾಲ್ತೇಶ್ ಟ್ರಾಕ್ಟರ್ ಮಾಲೀಕ ಮತ್ತು ಡ್ರೈವರ್ ಆಗಿದ್ದಾರೆ. ಜಮೀನು ಹೂಡುವ ಜಾಗ ತೋರಿಸಲು ಅಭಯ್ ಜೊತೆಗೆ ತೆರಳಿದ್ದನು. ಅಭಯ್ ಶಿವಮೊಗ್ಗದ ಗಿರಿದೀಪಂ ಶಾಲೆಯ 9 ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.
ಕಾಲು ತೊಳೆಯಲು ಹೋದ ಅಭಯ್ ನ ಕಾಲು ಜಾರಿದೆ.

Kumsi Police ಟ್ರ್ಯಾಕ್ಟರ್ ಮೇಲಿದ್ದ ಮಾಲ್ತೇಶ್ ಅಭಯ್ ನನ್ನ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಕೃಷಿ ಹೊಂಡದಿಂದ ಮೇಲೆ ಬರಲು ಆಗದೇ ಹೊಂಡದಲ್ಲೇ ಇಬ್ವರೂ ಕೊನೆ ಉಸಿರು ಎಳೆದಿದ್ದಾರೆ.

ಮಾಲತೇಶ್ ಗೆ ಮದುವೆ ಆಗಿ ಕೇವಲ ಎಂಟು ತಿಂಗಳುಗಳು ಕಳೆದಿತ್ತು.
ಸಾರ್ವಜನಿಕರ ಸಹಾಯದಿಂದ ಇಬ್ಬರ ಮೃತದೇಹವನ್ನ ಪೊಲೀಸರು ಹೊರತೆಗೆದಿದ್ದಾರೆ. ಮೃತದೇಹದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರಾವಾನಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...