Monday, February 2, 2026
Monday, February 2, 2026

Dr. H.B.Manjunath ಚಂಚಲತೆಯಿಂದ ಸತ್ಯ ಗ್ರಾಹ್ಯತೆ ಅಸಾಧ್ಯ. ಸತ್ಯವಿಲ್ಲದೇ ಪರಮಾತ್ಮನನ್ನು ಅರ್ಥೈಸಲು ಸಾಧ್ಯವಿಲ್ಲ- ಡಾ.ಎಚ್.ಬಿ.ಮಂಜುನಾಥ್

Date:

Dr. H.B.Manjunath ಚಂಚಲ ಮನಸ್ಸು ಸತ್ಯವನ್ನು ಗ್ರಹಿಸಲು ಸಾಧ್ಯವಿಲ್ಲ, ಸತ್ಯವನ್ನು ಗ್ರಹಿಸದೇ ಪರಮಾತ್ಮವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ, ಚಿತ್ತದ ಏಕಾಗ್ರತೆಯೇ ಇದಕ್ಕೆ ಪರಿಹಾರ ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಹೇಳಿದರು.

ಅವರು ಸಾಲಿಗ್ರಾಮ ಕೂಟ ಮಹಾ ಜಗತ್ತಿನ ದಾವಣಗೆರೆ ಅಂಗ ಸಂಸ್ಥೆ ವತಿಯಿಂದ ನಗರದ ಶ್ರೀ ಕೃಷ್ಣ ಕಲಾಮಂದಿರದಲ್ಲಿ ಏರ್ಪಾಡಾಗಿದ್ದ ಶ್ರೀ ನರಸಿಂಹ ಜಯಂತಿ ಕಾರ್ಯಕ್ರಮದ ಆಧ್ಯಾತ್ಮಿಕ ಉಪನ್ಯಾಸ ನೀಡುತ್ತಾ ಶಾಸ್ತ್ರಾಧ್ಯಯನ ವಾಗಲಿ, ಭಕ್ತಿ ಸಮರ್ಪಣೆಯೇ ಆಗಲಿ, ಭಗವದ್ ಸಾಕ್ಷಾತ್ಕಾರಕ್ಕಾಗಲಿ, ಸತ್ಯಾನ್ವೇಷಣೆಗಾಗಲಿ ಚಿತ್ತ ಏಕಾಗ್ರತೆ ಅವಶ್ಯ, ಇದು ಉಂಟಾದಾಗ ಯಾವುದೂ ನಮಗೆ ಕಷ್ಟ ಮತ್ತು ದುಸ್ತರ ಎನಿಸುವುದಿಲ್ಲ, ಅಧ್ಯಯನವೇ ಆಗಲಿ, ಧ್ಯಾನವೇ ಆಗಲಿ, ಆರಾಧನೆಯೇ ಆಗಲಿ, ಭಜನೆ, ಶ್ರವಣವೇ ಆಗಲಿ ಏಕಾಗ್ರತೆಯಿಂದ ಮಾತ್ರ ಮನನ ಸಾಧ್ಯ ಎಂಬುದನ್ನು ಸ್ವಾರಸ್ಯಕರ ಉದಾಹರಣೆಗಳ ಸಹಿತ ವಿವರಿಸಿದರು.

Dr. H.B.Manjunath ಕೂಟ ಮಹಾ ಜಗತ್ತು ದಾವಣಗೆರೆ ಅಂಗಸಂಸ್ಥೆಯ ನೂತನ ಅಧ್ಯಕ್ಷರಾದ ಮೋತಿ ಎನ್ ರಾಘವೇಂದ್ರ,ಪದಾಧಿಕಾರಿಗಳಾದ ಕೆ ಶಿವರಾಮ ಕಾರಂತ, ಬಾಲಕೃಷ್ಣ ವೈದ್ಯ, ಸುಬ್ರಹ್ಮಣ್ಯ ಹೊಳ್ಳ, ಶ್ರೀನಿವಾಸ ಕಾರಂತ, ಮೋತಿ ಪಿ ಪರಮೇಶ್ವರ್ ರಾವ್, ಕೇಶವಮೂರ್ತಿ ಕಾರಂತ, ಮೋತಿ ಆರ್ ಸುಬ್ರಮಣ್ಯ ಗುರು ಪ್ರಸಾದ್ ಮುಂತಾದವರು ಭಾಗವಹಿಸಿದ್ದು ರೋಹಿಣಿ ಹೊಳ್ಳ ಮತ್ತು ಸಂಗಡಿಗರು ಭಜನೆ ನೆರವೇರಿಸಿದರೆ ಹರೀಶ್ ಹೊಳ್ಳ ಮುಂತಾದವರು ಪೂಜೆಯನ್ನೂ, ಹರೀಶ್ ಐತಾಳ್ ತಂಡದವರು ಚೆಂಡೆ ಸೇವೆಯನ್ನೂ ನೆರವೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...