Friday, March 20, 2026
Friday, March 20, 2026

Vijay Technocrats ತಂತ್ರಜ್ಞಾನ ಮುಂದುವರೆದಂತೆ ಸಂಸ್ಕೃತಿ ಆಸಕ್ತಿ ಕಡಿಮೆಯಾಗುತ್ತಿದೆ- ಹೆಚ್.ಕೆ.ಲೋಕೇಶ್

Date:

Vijay Technocrats ದೇಶದ ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ ಎಂದು ಎಯುಎಂಎ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನ ಸಪ್ಲೆ ಚೈನ್ ಮ್ಯಾನೇಜ್‌ಮೆಂಟ್ ಮುಖ್ಯಸ್ಥ ಸೌರೆನ್ ಪಾಲ್ ಹೇಳಿದರು.
ಮಲ್ನಾಡ್ ಶೈರ್ ಇಕೋ ರೆಸಾರ್ಟ್ ನಲ್ಲಿ ಆಯೋಜಿಸಿದ್ದ 63ನೇ ಐಐಎಫ್ ದಕ್ಷಿಣ ವಲಯದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಭಾರತ ಸರ್ಕಾರದ ಮುಂದಿನ ಅಭಿವೃದ್ಧಿ ಯೋಜನೆಗಳಿಂದ ಕೈಗಾರಿಕಾ ಉತ್ಪಾದನಾ ವಲಯಕ್ಕೆ ಉತ್ತಮ ಬೇಡಿಕೆ ಸೃಷ್ಟಿಯಾಗಲಿ ಎಂದು ತಿಳಿಸಿದರು.
ಕೈಗಾರಿಕಾ ಕ್ಷೇತ್ರದ ತಯಾರಿಕಾ ವಲಯದ ಸ್ಪರ್ಧಾತ್ಮಕತೆ, ಪರಿಣಾಮಕಾರಿ ವೆಚ್ಚದಲ್ಲಿ ಉತ್ಪಾದನೆ, ಉತ್ತಮ ಗುಣಮಟ್ಟದ ಕ್ಯಾಸ್ಟಿಂಗ್ ತಯಾರಿಕೆ ಹಾಗೂ ಸಮಯಕ್ಕೆ ಸರಿಯಾಗಿ ಸರಬರಾಜು ಮಾಡುವ ಬದ್ಧತೆ ಬಗ್ಗೆ ಉದ್ಯಮಿಗಳು ಗಮನ ವಹಿಸಬೇಕು ಎಂದರು.
ಐಐಎಫ್ ರಾಷ್ಟ್ರೀಯ ಅಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಮಾತನಾಡಿ, ದೇಶದ ಕೈಗಾರಿಕಾ ವಲಯದ ಬೆಳವಣಿಗೆಯಲ್ಲಿ ಐಐಎಫ್ ಮಹತ್ತರ ಪಾತ್ರ ವಹಿಸಿದ್ದು, ಐಐಎಫ್ ದಕ್ಷಿಣ ವಲಯದ ಹೊಸ ತಂಡ ದೇಶದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಐಐಎಫ್ ದಕ್ಷಿಣ ವಲಯದ 2024-25ನೇ ಸಾಲಿನ ಅಧ್ಯಕ್ಷರಾಗಿ ಶಿವಮೊಗ್ಗದ ವಿಜಯ್ ಟೆಕ್ನೋಕ್ರಾಟ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಜಿ.ಬೆನಕಪ್ಪ ಅಧಿಕಾರ ಸ್ವೀಕರಿಸಿದರು.
ಐಐಎಫ್ ದಕ್ಷಿಣ ವಲಯ ನೂತನ ಅಧ್ಯಕ್ಷ ಡಿ.ಜಿ.ಬೆನಕಪ್ಪ ಮಾತನಾಡಿ, ಸೇವೆ ಹಾಗೂ ಭವಿಷ್ಯದ ತಂತ್ರಜ್ಞಾನ, ಉತ್ಪಾದನೆಯಲ್ಲಿ ಹೊಸ ಪರಿಕಲ್ಪನೆ, ಫೌಂಡ್ರಿ ಉದ್ಯಮದ ಸದಸ್ಯರಿಗೆ ಸಹಕಾರಿಯಾಗುವ ತಾಂತ್ರಿಕ ಕಾರ್ಯಕ್ರಮಗಳು, ಹಸರೀಕರಣ, ಕಾರ್ಯಪದ್ಧತಿಯ ಸುಧಾರಣೆ, ರಫ್ತು ತರಬೇತಿ, ಯುವ ಉದ್ಯಮಿಗಳು/ವಿದ್ಯಾರ್ಥಿಗಳಿಗೆ ತಯಾರಿಕಾ ವಲಯಕ್ಕೆ ಆಕರ್ಷಿಸಲು ಪ್ರೇರಣೆ ನೀಡುವುದು, ಉದ್ಯೋಗಿಗಳಿಗೆ ಪ್ರತಿಭೆ, ಕಾರ್ಯತತ್ಪರತೆ ಹಾಗೂ ಸೃಜನಶೀಲತೆ ಹೆಚ್ಚಿಸಲು ಶಿಕ್ಷಣ ಮತ್ತು ತರಬೇತಿ, ಪ್ರಮಾಣಪತ್ರ ನೀಡುವುದು ಹಾಗೂ ಇನ್ನಿತರೆ ಉಪಯೋಗಿ ಕಾರ್ಯಕ್ರಮಗಳ ಮುಖಾಂತರ ಸದಸ್ಯರ ಸೇವೆಗೆ ಹಾಗೂ ಐಐಎಫ್ ಬೆಳವಣಿಗೆಗೆ ಪ್ರಯತ್ನ ಮಾಡಲು ಬದ್ಧ ಎಂದು ತಿಳಿಸಿದರು.
Vijay Technocrats ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಹೈದ್ರಾಬಾದ್ ಹಾಗೂ ಕೇರಳದ ರಾಜ್ಯಗಳಿಂದ 250ಕ್ಕೂ ಹೆಚ್ಚು ಕೈಗಾರಿಕಾ ಪ್ರತಿನಿಧಿಗಳು, ದಕ್ಷಿಣ ವಲಯದ ಹಾಗೂ ಶಾಖೆಗಳ ಮಾಜಿ ಅಧ್ಯಕ್ಷರು, ಶಿವಮೊಗ್ಗದ ಮಾಚೇನಹಳ್ಳಿ, ಸಾಗರ ರಸ್ತೆ ಮತ್ತು ಕಲ್ಲೂರು ಮಂಡ್ಲಿ ಕೈಗಾರಿಕಾ ವಸಹಾತುವಿನ ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷಎನ್‌.ಗೋಪಿನಾಥ್‌, ವಸಂತ ಹೋಬಳಿದಾರ್‌, ಜಿ.ವಿಜಯಕುಮಾರ್‌, ಬಿ.ಗೋಪಿನಾಥ್‌, ರಮೇಶ್‌ ಹೆಗಡೆ, ಎಂ.ರಾಜು, ಡಿ.ಎಂ.ಶಂಕರಪ್ಪ, ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ, ದಾಮೋದರ ಬಾಳಿಗ, ಎಂ.ರಾಜು, ಎಂ.ಹಾಲಪ್ಪ, ಡಿ.ಬಿ.ಅಶೋಕ್, ಡಿ.ಜಿ.ಬೆನಕಪ್ಪ, ಡಿ.ಜಿ.ಶಾಂತನಗೌಡ, ಮಹಾವೀರ ಜೈನ್, ರೋಟರಿ ಶಿವಮೊಗ್ಗ ಸದ್ಯಸರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...