Thursday, September 17, 2026
Thursday, September 17, 2026

Supreme Court ಸಚಿವ ಜಮೀರ್ ವಿರುದ್ಧ “ಗ್ಯಾರಂಟಿ” ಕೇಸ್. ಅರ್ಜಿದಾರರ ಮೇಲ್ಮನವಿ ವಜಾ ಗೈದ ಕೋರ್ಟ್

Date:

Supreme Court 2023ರ ವಿಧಾನಸಭೆ ಚುನಾವಣೆಯ ವೇಳೆ ಕರ್ನಾಟಕ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಕುರಿತು ಕುರಿತು ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ಝಡ್‌ ಝಮೀರ್‌ ಅಹ್ಮದ್ ಖಾನ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಕೆವಿ ವಿಶ್ವನಾಥನ್‌ ಅವರಿದ್ದ ಪೀಠ, “ಪ್ರಣಾಳಿಕೆಯಲ್ಲಿ ರಾಜಕೀಯ ಪಕ್ಷಗಳು ನೀಡುವ ಭರವಸೆಗಳು ಭ್ರಷ್ಟ ವ್ಯವಹಾರಕ್ಕೆ ಸಮವಲ್ಲ” ಎಂದು ಹೇಳಿದ್ದು, ಮೇಲ್ಮನವಿಯನ್ನು ವಜಾಗೊಳಿಸಿದೆ.
Supreme Court ಕರ್ನಾಟಕ ವಿಧಾನಸಭಾ ಚುನಾವಣೆಯ 2023ರ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿದ ಆಶ್ವಾಸನೆಗಳು ಸಾರ್ವಜನಿಕರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಆರ್ಥಿಕ ಸಹಾಯ ಕಲ್ಪಿಸಿದ್ದು, ಇದು ಅಭ್ಯರ್ಥಿಯ ಭ್ರಷ್ಟ ವ್ಯವಹಾರಕ್ಕೆ ಕಾರಣವಾಗುತ್ತದೆ ಎಂಬ ವಕೀಲರ ವಾದ ನಂಬಲರ್ಹವಲ್ಲ ಹಾಗೂ ಅದನ್ನು ಒಪ್ಪಲಾಗದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
ಝಮೀರ್ ಅಹ್ಮದ್ ಖಾನ್ ಅವರ ಆಯ್ಕೆ ಪ್ರಶ್ನಿಸಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಮತದಾರರೊಬ್ಬರು ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.
2023ರ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಗಳು ಸಾರ್ವಜನಿಕರಿಗೆ ನೇರ ಮತ್ತು ಪರೋಕ್ಷ ಆರ್ಥಿಕ ಸಹಾಯ ಕಲ್ಪಿಸಿದ್ದು, ಇದು ಭ್ರಷ್ಟ ಚುನಾವಣಾ ವ್ಯವಹಾರ ಎಂದು ದೂರುದಾರರು ವಾದಿಸಿದ್ದರು.
ವಾದ ಆಲಿಸಿದ್ದ ಕರ್ನಾಟ ಹೈಕೋರ್ಟ್‌ ಇದು ತಪ್ಪು ನೀತಿಗೆ ಉದಾಹರಣೆಯಾಗಿರಬಹುದಾದರೂ, ಜನ ಪ್ರತಿನಿಧಿ ಕಾಯ್ದೆಯಡಿ ಭ್ರಷ್ಟ ವ್ಯವಹಾರ ಎನ್ನಲಾಗದು ಎಂದು ಅಭಿಪ್ರಾಯಪಟ್ಟಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...