Tuesday, October 1, 2024
Tuesday, October 1, 2024

Gopal Krishna Belur ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಸೂಕ್ತ- ಬೇಳೂರು ಗೋಪಾಲಕೃಷ್ಣ

Date:

Gopal Krishna Belur ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದು, ಚಿರಪರಿಚಿತರಾಗಿರುವುದು ಗೆಲುವಿಗೆ ಸಹಕಾರಿ ಆಗಲಿದೆ ಎಂದರು.
ಶಿಕ್ಷಕರು, ಪದವೀಧರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದೇವೆ. ಎರಡೂ ವರ್ಗಗಳ ಸಮಸ್ಯೆಗಳು ಹಾಗೂ ಅವರ ಬೇಡಿಕೆಗಳ ಕುರಿತು ಸರಕಾರಕ್ಕೆ ಅರಿವಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಗೆಹರಿಸಲು ಸರಕಾರ ಬದ್ಧವಾಗಿದೆ. ಪ್ರಸ್ತುತ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವುದು ಹೆಚ್ಚು ಸೂಕ್ತ ಎಂದರು.
ಇತ್ತೀಚೆಗೆ ಕೇಳಿ ಬಂದಿರುವ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಸರಕಾರದ ಅಧೀನದಲ್ಲಿರುವ ಪೊಲೀಸ್ ಹಾಗೂ ಸಿಐಡಿಗಳು ಕ್ಷಮತೆ ಹೊಂದಿವೆ. ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಯಾವುದೇ ಮುಲಾಜಿಲ್ಲ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹತಾಶೆಯ ಭಾವಕ್ಕೆ ಒಳಗಾಗಿ ಕಾಂಗ್ರೆಸ್ ವಿರುದ್ಧ ವೃಥಾರೋಪ ಮಾಡುತ್ತಿದ್ದಾರೆ ಎಂದರು.
Gopal Krishna Belur ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ನೀರಿನ ಕೊರತೆ ಸಮಸ್ಯೆ ಕಡಿಮೆಯಾಗಿದೆ. ಅನಾಹುತಗಳು ಸಂಭವಿಸಿದಲ್ಲಿ ತ್ವರಿತಗತಿಯಲ್ಲಿ ಅಗತ್ಯ ಕ್ರಮ ವಹಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ನಾಗರಿಕರಿಗೆ ಸಮಸ್ಯೆ ಉಂಟಾಗದAತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಸುಮಾ ಸುಬ್ರಹ್ಮಣ್ಯ, ಶ್ರೀನಿವಾಸ ಕಾಮತ್, ಜಯಶೀಲಪ್ಪಗೌಡ, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ಚಿದಂಬರ, ಪ್ರವೀಣ್ ಬೃಂದಾವನ, ಜಯನಗರ ಗುರು, ಸಣ್ಣಕ್ಕಿ ಮಂಜು, ಅಶ್ವಿನಿಕುಮಾರ್, ನೇತ್ರಾ ಸುಬ್ರಾಯಭಟ್, ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...