Monday, August 3, 2026
Monday, August 3, 2026

Mamata Banerjee ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಮಮತಾ ಬ್ಯಾನರ್ಜಿ ಟಾಂಗ್

Date:

Mamata Banerjee ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ’ ಎಂಬ ಪ್ರಧಾನಿ ಮೋದಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೇವರುಗಳು ರಾಜಕೀಯ ಮಾಡಬಾರದು ಮತ್ತು ಗಲಭೆಗಳನ್ನು ಪ್ರಚೋದಿಸಬಾರದು, ನಾವು ದೇವಾಲಯ ಕಟ್ಟಿಸಿ ಕೊಡುತ್ತೇವೆ ಅಲ್ಲಿರಬೇಕು ಎಂದು ಪ್ರಧಾನಿ ಮೋದಿಗೆ ಟಾಂಗ್‌ ನೀಡಿದ್ದಾರೆ.

ಕೋಲ್ಕತ್ತಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಮೋದಿಯವರು ತಮ್ಮನ್ನು ತಾವು ದೇವರೆಂದು ಪರಿಗಣಿಸಿದ್ದರೆ, ಅವರಿಗೆ ದೇವಾಲಯವನ್ನು ನಿರ್ಮಿಸಬೇಕು, ಅಲ್ಲಿ ಕುಳಿತುಕೊಳ್ಳಬೇಕು ಮತ್ತು ದೇಶವನ್ನು ತೊಂದರೆಗೊಳಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ದೇವರುಗಳ ದೇವರು ಎಂದು ಒಬ್ಬರು ಹೇಳುತ್ತಾರೆ, ಮತ್ತೊಬ್ಬ ‘ಜಗನ್ನಾಥ ‘ ಮೋದಿಯ ಭಕ್ತ ಎಂದು ಹೇಳುತ್ತಾರೆ. ಅವರು ದೇವರಾಗಿದ್ದರೆ ಅವರು ರಾಜಕೀಯ ಮಾಡಬಾರದು, ಗಲಭೆಗಳನ್ನು ಪ್ರಚೋದಿಸಬಾರದು. ನಾವು ಅವರಿಗೆ ದೇವಸ್ಥಾನ ನಿರ್ಮಿಸುತ್ತೇವೆ ಮತ್ತು ಅಲ್ಲಿ ಅವರನ್ನು ಪೂಜಿಸಿ, ಪ್ರಸಾದ, ಹೂವುಗಳನ್ನು ಅರ್ಪಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ಮೋದಿ ಇತ್ತೀಚೆಗೆ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಪುರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ ಇತ್ತೀಚೆಗೆ ಹೇಳಿಕೆಯೊಂದನ್ನು ನೀಡಿ ಜಗನ್ನಾಥ “ಮೋದಿಯ ಭಕ್ತ” ಎಂದು ಹೇಳಿದ್ದರು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಂಬಿತ್ ಪಾತ್ರಾ ಕ್ಷಮೆ ಯಾಚಿಸಿದ್ದರು.

Mamata Banerjee ಪ್ರಧಾನಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮಮತಾ, ಅಟಲ್ ಬಿಹಾರಿ ವಾಜಪೇಯಿ ಅವರಂತಹ ಅನೇಕ ಪ್ರಧಾನಿಗಳೊಂದಿಗೆ ನಾನು ಕೆಲಸ ಮಾಡಿದ್ದೇನೆ, ಅವರು ನನ್ನನ್ನು ತುಂಬಾ ಪ್ರೀತಿಸುತ್ತಿದ್ದರು, ನಾನು ಮನಮೋಹನ್ ಸಿಂಗ್, ರಾಜೀವ್ ಗಾಂಧಿ, ನರಸಿಂಹರಾವ್, ದೇವೇಗೌಡರ ಜೊತೆ ಕೆಲಸ ಮಾಡಿದ್ದೇನೆ, ಆದರೆ ಮೋದಿಯಂತೆ ಯಾರನ್ನು ನೋಡಿಲ್ಲ, ಅವರಂತಹ ಪ್ರಧಾನಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...