Wednesday, October 2, 2024
Wednesday, October 2, 2024

Kota Srinivasa Pujari ಸರ್ಕಾರವು ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಿ & ಪ್ರಕರಣವನ್ನ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು- ಕೋಟಾ ಶ್ರೀನಿವಾಸ ಪೂಜಾರಿ

Date:

Kota Srinivasa Pujari ಸರ್ಕಾರಿ ಅಧಿಕಾರಿ ಚಂದ್ರಶೇಖರ್ ಮನೆಗೆ ಬುಧವಾರ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿ ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮಗಳ ಬಳಿ ಮಾತನಾಡಿದ ಅವರು, ಚಂದ್ರಶೇಖರ್ ಕುಟುಂಬಕ್ಕೆ ೨೫ ಲಕ್ಷ ಪರಿಹಾರ ಬಿಡುಗಡೆ ಮಾಡಬೇಕು. ಪ್ರಕರಣವನ್ನು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ವಹಿಸಬೇಕೆಂದು ಆಗ್ರಹ ಮಾಡಿದರು.

ಸಾರ್ವಜನಿಕ ಹಾಗು ಅವರ ಇಲಾಖೆಯ ಇತರೆ ಸಿಬ್ಬಂದಿಗಳ ಮಾಹಿತಿ ಪ್ರಕಾರ ಚಂದ್ರಶೇಖರ್ ಅತ್ಯಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಪರಿಶಿಷ್ಟ ಪಂಗಡ ಅಭಿವೃದ್ಧಿಗಾಗಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂಪಾಯಿಯನ್ನು ಇಡಲಾಗಿತ್ತು ಇದರ ಪೈಕಿ 87 ಕೋಟಿ ರೂಪಾಯಿಗಳನ್ನು ಅನ್ಯ ಕಾರ್ಯ ಕಾರಣ ಹೇಳಿ ಇತರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ.

ಮೇಲಾಧಿಕಾರಿಗಳು ಅಕ್ರಮವಾಗಿ ಹೀಗೆ ಹಣ ವರ್ಗಾವಣೆ ಮಾಡಿಕೊಂಡು ನಿರ್ದೋಷಿಯಾದ ತನ್ನ ತಲೆಗೆ ಕಟ್ಟುತ್ತಿದ್ದಾರೆ ಎಂದು ಚಂದ್ರಶೇಖರ್ ಡೆತ್ ನೋಟಲ್ಲಿ ಬರೆದಿಟ್ಟಿದ್ದಾರೆ ಎಂದರು.
ಅವರ ಕುಟುಂಬವನ್ನು ಭೇಟಿ ಮಾಡಿದಾಗ ನನ್ನ ಪತಿ ಪ್ರಮಾಣಿಕರು ಯಾವುದೇ ಅಕ್ರಮ ಮಾಡಿಲ್ಲ. ನಾನು ಯಾವುದೋ ಒಂದು ಕಡೆ ದಿನಗೂಲಿ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದೇನೆ ಚಂದ್ರಶೇಖರ್ ಪತ್ನಿ ತಿಳಿಸಿದ್ದಾರೆ ಮಕ್ಕಳು ಸಾಕುವುದು ಕುಟುಂಬ ನಿರ್ವಹಣೆ ನನಗೆ ಕಷ್ಟವಾಗಿದೆ ಎಂದು ಗೋಗರೆಯುತ್ತಿದ್ದಾರೆ.

Kota Srinivasa Pujari ಪರಿಶಿಷ್ಟ ಪಂಗಡದ ಇಲಾಖೆಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡು ಡೆತ್ ನೋಟಲ್ಲಿ ಇಲಾಖೆಯ ಅಕ್ರಮ ಹಣ ವರಗಾಗವಣೆಯಲ್ಲಿ ಇಲಾಖೆ ಸಚಿವ ನಾಗೇಂದ್ರ ರವರ ಕೈವಾಡ ಇದೆ ಎಂದು ಹಾಗು ಇಲಾಖೆಯ ಮೂವರು ಅಧಿಕಾರಿಗಳು ಶಾಮೀಲಾಗಿರುವುದರ ಬಗ್ಗೆ ಹೇಳಲಾಗಿದೆ ಇದೆಲ್ಲವೂ ಕಣ್ಣ ಮುಂದೆ ಇರುವಾಗ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ಧರಾಮಯ್ಯ ತಕ್ಷಣ ಸಚಿವರ ರಾಜಿನಾಮೆ ಪಡೆಯಬೇಕಿತ್ತು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...