Tuesday, February 3, 2026
Tuesday, February 3, 2026

Dr. Shanth A. Thimmaiah ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನ ವಜಾಗೊಳಿಸಿ ಆದೇಶ

Date:

Dr. Shanth A. Thimmaiah ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಡಾ. ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ (ಮೇ 31) ಆದೇಶ ಹೊರಡಿಸಿದೆ.

ಮಂಡಳಿಯ ಪ್ರಚಾರ ಜಾಹೀರಾತು ನೀಡುವಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಶಾಂತ್ ಎ ತಿಮ್ಮಯ್ಯ ಅವರ ವಿರುದ್ಧ ಕೇಳಿ ಬಂದಿತ್ತು.
ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಮಂಜೂರಾತಿಯಲ್ಲಿ ಪಾರದರ್ಶಕತೆ ಕಾಯ್ದೆ ಉಲ್ಲಂಘಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಕಡೆಗಣಿಸಿ ಖಾಸಗಿ ಜಾಹೀರಾತು ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿ ಶಾಂತ್‌ ತಿಮ್ಮಯ್ಯ ಸಾರ್ವಜನಿಕ ಹಣದ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

Dr. Shanth A. Thimmaiah ಈ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿತ್ತು. ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹದೇವ ಅವರು ತನಿಖೆ ನಡೆಸಿ ಸಲ್ಲಿಸಿದ ವರದಿಯನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಂಡಿದೆ. ಮಂಡಳಿಯ ಸದಸ್ಯ ಸ್ಥಾನದಿಂದಲೂ ಶಾಂತ್‌ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...