Thursday, September 17, 2026
Thursday, September 17, 2026

Dr. Shanth A. Thimmaiah ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನ ವಜಾಗೊಳಿಸಿ ಆದೇಶ

Date:

Dr. Shanth A. Thimmaiah ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಡಾ. ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ (ಮೇ 31) ಆದೇಶ ಹೊರಡಿಸಿದೆ.

ಮಂಡಳಿಯ ಪ್ರಚಾರ ಜಾಹೀರಾತು ನೀಡುವಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಶಾಂತ್ ಎ ತಿಮ್ಮಯ್ಯ ಅವರ ವಿರುದ್ಧ ಕೇಳಿ ಬಂದಿತ್ತು.
ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಮಂಜೂರಾತಿಯಲ್ಲಿ ಪಾರದರ್ಶಕತೆ ಕಾಯ್ದೆ ಉಲ್ಲಂಘಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಕಡೆಗಣಿಸಿ ಖಾಸಗಿ ಜಾಹೀರಾತು ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿ ಶಾಂತ್‌ ತಿಮ್ಮಯ್ಯ ಸಾರ್ವಜನಿಕ ಹಣದ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

Dr. Shanth A. Thimmaiah ಈ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿತ್ತು. ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹದೇವ ಅವರು ತನಿಖೆ ನಡೆಸಿ ಸಲ್ಲಿಸಿದ ವರದಿಯನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಂಡಿದೆ. ಮಂಡಳಿಯ ಸದಸ್ಯ ಸ್ಥಾನದಿಂದಲೂ ಶಾಂತ್‌ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...