Thursday, February 5, 2026
Thursday, February 5, 2026

Dr. Keladi Gunda jois ನಾಡಿನ ಪ್ರಸಿದ್ಧ ಇತಿಹಾಸ ಸಂಶೋಧಕ ಡಾ.ಕೆಳದಿ ಗುಂಡಾಜೊಯಿಸ್ ನಿಧನ

Date:

Dr. Keladi Gundajois ಇತಿಹಾಸ ಸಂಶೋಧಕ, ಕೈ ಬರಹಗಳ ತಜ್ಞ, ಉತ್ಸಾಹದ 94 ವರ್ಷದ ಡಾ. ಕೆಳದಿ ಗುಂಡಾ ಜೋಯ್ಸ್ ರವರು ಭಾನುವಾರ ಸಂಜೆ ಸ್ವರ್ಗಸ್ಥರಾದರೆಂದು ತಿಳಿದುಬಂದಿದೆ.

ಅಂತಿಮ ದರ್ಶನಕ್ಕಾಗಿ ದೇಹವನ್ನು ಅವರ ಪುತ್ರರಾದ ಕೆಳದಿ ಡಾ.ವೆಂಕಟೇಶ್ ಜೋಯ್ಸ್ ರವರ ಸಾಗರದ ಅಣಲೇ ಕೊಪ್ಪ ಬಡಾವಣೆ ಮನೆಯಲ್ಲಿ ಇರಿಸಲಾಗಿತ್ತು. ಮೃತರ ಅಂತ್ಯಕ್ರಿಯೆ ಸೋಮವಾರ ಸಾಗರದ ಮಾರಿಕಾಂಬ ಚಿತಾಗಾರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಡಾ. ಕೆಳದಿ ಗುಂಡಾ ಜೋಯಿಸ ಅವರ ದೈವಾಧೀನರಾಗಿದ್ದಾರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಕನ್ನಡ ನಾಡಿನ ಶ್ರೇಷ್ಠ ಇತಿಹಾಸ ವಿದ್ವಾಂಸರಾದ ಡಾ. ಕೆಳದಿ ಗುಂಡಾ ಜೋಯಿಸರು ಕೆಳದಿ ಇತಿಹಾಸವನ್ನು ವಿಶ್ವಪ್ರಸಿದ್ಧ ಮಾಡುವಲ್ಲಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ್ದಾರೆ. ಇತಿಹಾಸ ಮತ್ತು ಲಿಪಿ ಕ್ಷೇತ್ರದಲ್ಲಿ ಅವರ ಸಾಧನೆಗಳು ಹಿರಿಯವು.
ಶ್ರೀಯುತರು ೨೦೦೪ರಲ್ಲಿ ಹೊನ್ನಾಳಿಯಲ್ಲಿ ನಡೆದ ಕರ್ನಾಟಕ ಇತಿಹಾಸ ಅಕಾಡೆಮಿಯ 18ನೇ ವಾರ್ಷಿಕ ಸಮ್ಮೇಳನ ಸರ್ವಾಧ್ಯಕ್ಷರಾಗಿದ್ದರು. ೨೦೧೮ರಲ್ಲಿ ಬಾದಾಮಿಯಲ್ಲಿ ನಡೆದ 32ನೇ ವಾರ್ಷಿಕ ಸಮ್ಮೇಳನದಲ್ಲಿ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿಗೆ ಭಾಜನರಾಗಿದ್ದರು. ಕರ್ನಾಟಕ ಇತಿಹಾಸ ಅಕಾದೆಮಿಯ ಹಿರಿಯ ಸದಸ್ಯರು ˌ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಾರ್ಗದರ್ಶಕರಾಗಿ ಸದಾ ಲವಲವಿಕೆಯಿಂದ ಬೆರೆಯುತ್ತಿದ್ದ ಹಿರಿಯರು ತಮ್ಮ ಕೊನೆಯ ದಿನಗಳವರೆಗೂ ಅಕಾದೆಮಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು.

Dr. Keladi Gundajois ನಿರಂತರ ಅಧ್ಯಯನ ಅಧ್ಯಾಪನ ಇತಿಹಾಸ ಸಂರಕ್ಷಣೆ ಹಾಗೂ ಹಲವು ಸಮಾಜಮುಖಿ ಕಾರ್ಯಗಳನ್ನು ತಮ್ಮ ಜೀವನದುದ್ದಕ್ಕೂ ನಡೆಸಿದ ಹಿರಿಯರ ಅಗಲಿಕೆ ನಾಡಿನ ಸಾಂಸ್ಕೃತಿಕ ಲೋಕಕ್ಕೆ, ಇತಿಹಾಸ ಅಕಾಡೆಮಿಗೆ ತುಂಬಲಾರದ ನಷ್ಟವಾಗಿದೆ. ಕರ್ನಾಟಕ ಇತಿಹಾಸ ಅಕಾಡೆಮಿಯು ನಾಡಿನ ಶ್ರೇಷ್ಠ ವಿದ್ವಾಂಸ ಡಾ. ಕೆಳದಿ ಗುಂಡಾ ಜೋಯಿಸರಿಗೆ ಗೌರ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...