Wednesday, October 2, 2024
Wednesday, October 2, 2024

Shivaganga Yoga Centre ಪರಿಸರ ನಾಶದಿಂದ ಮನುಕುಲವೇ ನಾಶ. ಪ್ಲಾಸ್ಡಿಕ್ ಬಳಕೆ ಕಡಿಮೆ ಮಾಡಿ-ಜಿ.ಎಸ್.ಓಂಕಾರ್

Date:

Shivaganga Yoga Centre ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆಯಾಗಿದ್ದು, ಪರಿಸರದ ರಕ್ಷಣೆಗಾಗಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯ ಯೋಗಶಿಕ್ಷಕ ಜಿ.ಎಸ್.ಓಂಕಾರ್ ಹೇಳಿದರು.

ಶಿವಮೊಗ್ಗ ನಗರದ ಶಿವಗಂಗಾ ಯೋಗಕೇಂದ್ರದ ರಾಘವ ಶಾಖೆಯಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡಕ್ಕೆ ನೀರೇರೆಯುವದರ ಮುಖಾಂತರ ಚಾಲನೆ ನೀಡಿ ಮಾತನಾಡಿ, ಪರಿಸರ ವಿನಾಶದಿಂದ ಮನುಕುಲವೇ ನಾಶವಾಗುತ್ತದೆ. ಪರಿಸರವನ್ನು ನಾವು ಆದಷ್ಟು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ತಿಳಿಸಿದರು.

ಇಂದು ನೀರು ಸಾಕಷ್ಟು ಕಡೆ ಕಲುಷಿತವಾಗುತ್ತಿದೆ. ನೀರಿನ ದುರ್ಬಳಕೆ ಸಲ್ಲದು. ಪರಿಸರ ದಿನಾಚರಣೆ ಆ ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಎಲ್ಲರ ಮನೆಗಳಲ್ಲೂ ಸಹ ಜನ್ಮದಿನ ಹಾಗೂ ವಿವಾಹ ವಾರ್ಷಿಕೋತ್ಸವ ಸಂದರ್ಭದಲ್ಲಿ ಗಿಡಗಳನ್ನು ನೆಡುವುದರ ಮುಖಾಂತರ ಪರಿಸರಕ್ಕೆ ಒಂದು ಸಣ್ಣ ಕೊಡುಗೆಯನ್ನು ನಾವು ನೀಡಬೇಕಾಗಿದೆ ಎಂದರು.

ಶಿಕ್ಷಕ ಹರೀಶ್ ಮಾತನಾಡಿ, ಇಂದು ಈ-ತ್ಯಾಜ್ಯ ವಸ್ತುವನ್ನು ಸರಿಯಾಗಿ ವಿಲೇವಾರಿ ಮಾಡದೇ ಇರುವುದರಿಂದ ಭೂಮಿ ಸಾಕಷ್ಟು ಹಾಳಾಗುತ್ತಿದೆ. ನಾವು ಮನೆಯಲ್ಲಿ ಬಳಸಿದ ಕಂಪ್ಯೂಟರ್ ಶೆಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನ ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಹೇಳಿದರು.

ಪರಿಸರವನ್ನ ಸುಂದರವಾಗಿ ಸ್ವಚ್ಛವಾಗಿ ಇಟ್ಟುಕೊಳ್ಳಲು ಪ್ರಯತ್ನಿಸಬೇಕು. ನಗರೀಕರಣದಿಂದ ಮರ ಗಿಡಗಳ ನಾಶವಾಗುತ್ತಿದೆ. ನಾವು ಬರುವ ದಿನಗಳಲ್ಲಿ ಹೆಚ್ಚು ಹೆಚ್ಚು ಮರ ಗಿಡಗಳನ್ನು ಬೆಳೆಸುವುದರ ಮುಖಾಂತರ ಒಳ್ಳೆಯ ಆಮ್ಲಜನಕವನ್ನು ಪಡೆಯುವುದರ ಮುಖಾಂತರ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

Shivaganga Yoga Centre ಇದೇ ಸಂದರ್ಭದಲ್ಲಿ ಡಾ. ಯಶ್ವಂತ್ ಮಾತನಾಡಿ, ಇಂದು ನಮ್ಮ ತುಂಗಾ ನದಿ ಸಾಕಷ್ಟು ಮಲಿನವಾಗುತ್ತಿದೆ. ಅದರಲ್ಲಿ ಸಿಲಿಕಾನ್ ಹೆಚ್ಚು ಹೆಚ್ಚು ತುಂಬಿ ನೀರು ಸಾಕಷ್ಟು ಕಲುಷಿತಗೊಳ್ಳುತ್ತಿದೆ. ಆದ್ದರಿಂದ ನಾವು ನದಿ ಪಾತ್ರವನ್ನು ಆದಷ್ಟು ಸ್ವಚ್ಚವಾಗಿಟ್ಟುಕೊಳ್ಳಬೇಕು. ಬೇಡವಾದ ಕಸವನ್ನು ನದಿಗೆ ಎಸೆಯುವುದರ ಮುಖಾಂತರ ನದಿಗಳನ್ನು ಹಾಳು ಮಾಡುತ್ತಿದ್ದೇವೆ. ನದಿಗಳು ನಮ್ಮ ಮೂಲ ಸಂಪತ್ತು. ಈ ನಿಟ್ಟಿನಲ್ಲಿ ನಾವು ನದಿಗಳನ್ನು ಕಾಪಾಡಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರಾದ ನರಸೋಜಿ ರಾವ್, ಶ್ರೀನಿವಾಸ್, ರೋಟರಿ ಜಿ.ವಿಜಯ್ ಕುಮಾರ್, ಸತೀಶ್, ಅರುಣ್, ಮಹೇಶ್, ಗಾಯಿತ್ರಿ, ಶೋಭಾ, ಶೈಲಾ ವಿಕ್ರಂ, ಶಂಕರ್, ಶಶಿಧರ್, ಮಾಲತಿ, ಸುಮಾ,
ಹಾಗೂ ಯೋಗ ಬಂಧುಗಳು ಉಪಸ್ಥಿತರಿದ್ದರು. ಇದರೊಂದಿಗೆ ಪರಿಸರ ಗೀತೆಗಳನ್ನು ಹಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...