Sunday, December 14, 2025
Sunday, December 14, 2025

Chamber Of Commerce Shivamogga ಪ್ರತಿಯೊಬ್ಬರೂ ಕಸ ವಿಲೇವಾರಿಗೆ ಪ್ರಾಮುಖ್ಯತೆ ನೀಡಬೇಕು- ಜಿ.ವಿಜಯ್ ಕುಮಾರ್

Date:

Chamber Of Commerce Shivamogga ಪುಸ್ತಕಗಳು ಜ್ಞಾನ ಭಂಡಾರವನ್ನು ವೃದ್ಧಿಸುವುದರ ಜತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹೇಳಿದರು.

ಹೊಸಮನೆಯ ಶ್ರೀ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನ ಮತ್ತು ಪ್ರೊ. ಸತ್ಯನಾರಾಯಣ ಅವರ ಕೃತಿ ಭಾವತರಂಗ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈಗಾಗಲೇ ಸಾಕಷ್ಟು ಪುಸ್ತಕಗಳನ್ನ ರಚನೆ ಮಾಡಿರುವ ಪ್ರೊ. ಸತ್ಯನಾರಾಯಣ ಅವರ ಸಾಧನೆ ಅನನ್ಯ. ಸಮಾಜಮುಖಿ ಸೇವೆಗಳ ಜತೆಗೆ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕವನಗಳನ್ನ ರಚನೆ ಮಾಡಿ ಇಂದಿಗೂ ಸಹ ವಾಚಿಸುತ್ತಿರುವ ಆಶು ಕವಿಗಳಲ್ಲಿ ಸತ್ಯನಾರಾಯಣ ಒಬ್ಬರು ಎಂದು ತಿಳಿಸಿದರು.

ಪ್ರತಿಯೊಬ್ಬರೂ ಕಸ ವಿಲೇವಾರಿಯಲ್ಲಿ ಪ್ರಾಮುಖ್ಯತೆ ವಹಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಸಮರ್ಪಕವಾಗಿ ಕಸ ವಿಲೇವಾರಿ ಮಾಡದೇ ಇದ್ದರೆ ಪರಿಸರಕ್ಕೆ ಇನ್ನಷ್ಟು ತೊಂದರೆಯಾಗುತ್ತದೆ. ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಸತ್ಯನಾರಾಯಣ ಮಾತನಾಡಿ, ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದ್ದು, ಪ್ರತಿಯೊಬ್ಬರೂ ಸಸಿಗಳನ್ನು ನೆಡುವ ಮೂಲಕ ಪೋಷಣೆ ಮಾಡಬೇಕು. ಉತ್ತಮ ಪರಿಸರ ನಿರ್ಮಾಣ ಮಾಡುವಲ್ಲಿ ಎಲ್ಲರೂ ಮಹತ್ತರ ಪಾತ್ರ ವಹಿಬೇಕು ಎಂದು ತಿಳಿಸಿದರು.

Chamber Of Commerce Shivamogga ಇದೇ ಸಂದರ್ಭದಲ್ಲಿ ರೋಟರಿ ಜಿ.ವಿಜಯ್ ಕುಮಾರ್, ನಾಗರಾಜ್ ಅರ್ಕಾಚಾರ್ ಹಾಗೂ ಪ್ರೊ. ಸತ್ಯನಾರಾಯಣ ಅವರನ್ನು ಸನ್ಮಾನಿಸಲಾಯಿತು. ನಾಗರಾಜ್ ಅರ್ಕಾಚಾರ್ ಕಥೆ ಕವನ ವಾಚಿಸಿದರು. ಭಾವ ತರಂಗ ಕವನ ಸಂಕಲನ ಪುಸ್ತಕವನ್ನು ಜಿ.ವಿಜಯಕುಮಾರ್ ಲೋಕಾರ್ಪಣೆಗೊಳಿಸಿದರು.
ಉಪ ಪ್ರಾಚರ್ಯೆ ಲಕ್ಷ್ಮಿ, ಚುಟುಕು ಸಾಹಿತ್ಯ ಪರಿಷತ್ತಿನ ಖಜಾಂಚಿ ರಮೇಶ್ ಕೌಟೇಕರ್, ಅಕ್ಷತಾ ನಿಶ್ಚಿತ, ಡಾ. ರಾಜಶೇಖರಯ್ಯ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...