Sunday, August 2, 2026
Sunday, August 2, 2026

Chamber Of Commerce Shivamogga ಪ್ರತಿಯೊಬ್ಬರೂ ಕಸ ವಿಲೇವಾರಿಗೆ ಪ್ರಾಮುಖ್ಯತೆ ನೀಡಬೇಕು- ಜಿ.ವಿಜಯ್ ಕುಮಾರ್

Date:

Chamber Of Commerce Shivamogga ಪುಸ್ತಕಗಳು ಜ್ಞಾನ ಭಂಡಾರವನ್ನು ವೃದ್ಧಿಸುವುದರ ಜತೆಗೆ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹೇಳಿದರು.

ಹೊಸಮನೆಯ ಶ್ರೀ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನ ಮತ್ತು ಪ್ರೊ. ಸತ್ಯನಾರಾಯಣ ಅವರ ಕೃತಿ ಭಾವತರಂಗ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈಗಾಗಲೇ ಸಾಕಷ್ಟು ಪುಸ್ತಕಗಳನ್ನ ರಚನೆ ಮಾಡಿರುವ ಪ್ರೊ. ಸತ್ಯನಾರಾಯಣ ಅವರ ಸಾಧನೆ ಅನನ್ಯ. ಸಮಾಜಮುಖಿ ಸೇವೆಗಳ ಜತೆಗೆ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕವನಗಳನ್ನ ರಚನೆ ಮಾಡಿ ಇಂದಿಗೂ ಸಹ ವಾಚಿಸುತ್ತಿರುವ ಆಶು ಕವಿಗಳಲ್ಲಿ ಸತ್ಯನಾರಾಯಣ ಒಬ್ಬರು ಎಂದು ತಿಳಿಸಿದರು.

ಪ್ರತಿಯೊಬ್ಬರೂ ಕಸ ವಿಲೇವಾರಿಯಲ್ಲಿ ಪ್ರಾಮುಖ್ಯತೆ ವಹಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಸಮರ್ಪಕವಾಗಿ ಕಸ ವಿಲೇವಾರಿ ಮಾಡದೇ ಇದ್ದರೆ ಪರಿಸರಕ್ಕೆ ಇನ್ನಷ್ಟು ತೊಂದರೆಯಾಗುತ್ತದೆ. ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಸತ್ಯನಾರಾಯಣ ಮಾತನಾಡಿ, ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದ್ದು, ಪ್ರತಿಯೊಬ್ಬರೂ ಸಸಿಗಳನ್ನು ನೆಡುವ ಮೂಲಕ ಪೋಷಣೆ ಮಾಡಬೇಕು. ಉತ್ತಮ ಪರಿಸರ ನಿರ್ಮಾಣ ಮಾಡುವಲ್ಲಿ ಎಲ್ಲರೂ ಮಹತ್ತರ ಪಾತ್ರ ವಹಿಬೇಕು ಎಂದು ತಿಳಿಸಿದರು.

Chamber Of Commerce Shivamogga ಇದೇ ಸಂದರ್ಭದಲ್ಲಿ ರೋಟರಿ ಜಿ.ವಿಜಯ್ ಕುಮಾರ್, ನಾಗರಾಜ್ ಅರ್ಕಾಚಾರ್ ಹಾಗೂ ಪ್ರೊ. ಸತ್ಯನಾರಾಯಣ ಅವರನ್ನು ಸನ್ಮಾನಿಸಲಾಯಿತು. ನಾಗರಾಜ್ ಅರ್ಕಾಚಾರ್ ಕಥೆ ಕವನ ವಾಚಿಸಿದರು. ಭಾವ ತರಂಗ ಕವನ ಸಂಕಲನ ಪುಸ್ತಕವನ್ನು ಜಿ.ವಿಜಯಕುಮಾರ್ ಲೋಕಾರ್ಪಣೆಗೊಳಿಸಿದರು.
ಉಪ ಪ್ರಾಚರ್ಯೆ ಲಕ್ಷ್ಮಿ, ಚುಟುಕು ಸಾಹಿತ್ಯ ಪರಿಷತ್ತಿನ ಖಜಾಂಚಿ ರಮೇಶ್ ಕೌಟೇಕರ್, ಅಕ್ಷತಾ ನಿಶ್ಚಿತ, ಡಾ. ರಾಜಶೇಖರಯ್ಯ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...