Thursday, July 9, 2026
Thursday, July 9, 2026

Kumar Bangarappa ಚುನಾವಣೆಯಲ್ಲಿ ದಿ.ಬಂಗಾರಪ್ಪ &ವರನಟ ಡಾ.ರಾಜ್ ಅವರ ಹೆಸರು ದುರುಪಯೋಗ ಮಾಡಿದ್ದಾರೆ. ಕುಮಾರ ಬಂಗಾರಪ್ಪ ‘ಗರಂ ಗರಂ’

Date:

ಲೋಕಸಭಾ ಚುನಾವಣೆಯಲ್ಲಿ ಇಲ್ಲಿನ ಶಾಸಕರು ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಮತ್ತು ರಾಜ್‌ಕುಮಾರ್ ಅವರ ಹೆಸರನ್ನು ದುರುಪಯೋಗ ಪಡಿಸಿಕೊಂಡು ಪ್ರಚಾರ ನಡೆಸಿ ಅಪಮಾನ ಮಾಡಿದ್ದಾರೆ ಮಾಜಿ ಶಾಸಕ ಕುಮಾರ ಬಂಗಾರಪ್ಪ ಕಿಡಿಕಾರಿದರು.

ಬಿಜೆಪಿ ಕಾರ್ಯಾಲಯದ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಜಕಾರಣ ಎನ್ನುವುದು ಒಂದ ಜಾತಿ, ವರ್ಗ ಹಾಗೂ ಒಬ್ಬ ವ್ಯಕ್ತಿಗೆ ಸೀಮಿತವಾಗಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನೆಡೆದರೆ ಯಶಸ್ಸು ಸಾಧ್ಯವಾಗುತ್ತದೆ. ಆದರೆ ಇಲ್ಲಿನ ಶಾಸಕರು ಜಾತಿ ರಾಜಕಾರಣ ಮಾಡುವ ಮೂಲಕ ಒಂದು ವರ್ಗದ ಮತಗಳನ್ನು ಸೆಳೆಯಲು ಹೋಗಿ ಮುಗ್ಗರಿಸಿದ್ದಾರೆ ಎಂದು ಹೇಳಿದರು.

ಚುನಾವಣಾ ಕಾಲದಲ್ಲಿ ನಡೆದ ತೀಕ್ಷ್ಣವಾದ ಟೀಕೆಗಳು ಏನೇ ಇರಲಿ. ಅವೆಲ್ಲವೂ ಚುನಾವಣಾ ಕಾಲಕ್ಕೆ ಮಾತ್ರ ಸೀಮಿತವಾಗಿರಲಿ. ಈಗಾಗಲೇ ಜನತೆ ತೀರ್ಪು ನೀಡಿದ್ದಾರೆ. ಟೀಕೆಗಳು ಮುಂದಿನ ರಾಜಕೀಯ ನಡೆಯಲ್ಲಿ ಅವಶ್ಯಕತೆ ಇಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಕಾಂಗ್ರೆಸ್‌ನ 37 ಸಾವಿರ ಮತಗಳ ಅಂತರದ ಗೆಲುವಿಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜಯಗಳಿಸಿಕೊಡುವುದರ ಮೂಲಕ ಮತದಾರ ಪ್ರತ್ಯುತ್ತರ ನೀಡಿದ್ದಾರೆ.

Kumar Bangarappa ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿ 18 ಸಾವಿರ ಅಧಿಕ ಮತಗಳು ಸೊರಬದಿಂದ ಚಲಾವಣೆಯಾಗಿರುವುದು ದಾಖಲೆಯಾಗಿದೆ. ಈ ಹಿಂದೆ ಯಾವ ಅಭ್ಯರ್ಥಿ ಕೂಡಾ ಅಷ್ಟೊಂದು ಅಂತರದ ಮತಗಳನ್ನು ಪಡೆದಿಲ್ಲ. ಇದು ಅಭಿವೃದ್ಧಿ ಎಂದರೆ ಏನು ಎನ್ನುವುದನ್ನು ತಿಳಿಯದ ಮತ್ತು ದುರಹಂಕಾರಿಗೆ ನೀಡಿದ ಉತ್ತರವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅವರ ಹೆಸರು ಹೇಳದೇ ತರಾಟೆಗೆ ತೆಗೆದುಕೊಂಡರು.

ಸಧ್ಯದಲ್ಲಿಯೇ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸೊರಬ ಮತ್ತು ಆನವಟ್ಟಿಯಲ್ಲಿ ಅಭಿನಂದನಾ ಸಭೆ ಹಮ್ಮಿಕೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...