Sunday, December 14, 2025
Sunday, December 14, 2025

Home Department ಹಮಾರೆ ಬಾರಾ ಸಿನಿಮಾ ನಿಷೇಧ

Date:

Home Department ವಿವಾದಿತ ಹಿಂದಿ ಚಲನಚಿತ್ರ ‘ಹಮಾರೆ ಬಾರಹ್’ ಬಿಡುಗಡೆಗೆ ಒಂದು ದಿನ ಮುನ್ನ, ಕರ್ನಾಟಕದಲ್ಲಿ ಅದರ ಪ್ರದರ್ಶನವನ್ನು ಸರ್ಕಾರ ನಿಷೇಧಿಸಿದೆ.
ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಗೃಹ ಇಲಾಖೆ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದೆ. ಹಿರಿಯ ನಟ ಅಣ್ಣು ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ ಇಂದು (ಜೂನ್ 7, ಶುಕ್ರವಾರ) ಬಿಡುಗಡೆಯಾಗಲಿದೆ.
ವಿವಿಧ ಜಿಲ್ಲೆಗಳು ಮತ್ತು ತಾಲೂಕುಗಳ ಮುಸ್ಲಿಂ ಗುಂಪುಗಳು ಸಿನಿಮಾ ಪ್ರದರ್ಶನ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಸಿನಿಮಾದ ನಿರ್ಮಾಪಕರು ಮುಸ್ಲಿಂ ಸಮುದಾಯದವನ್ನು ಅವಮಾನಿಸಿದ್ದಾರೆ. ಕುರಾನ್‌ನ ಸೂರಾ ಅಲ್-ಬಕರಾದಲ್ಲಿನ ಶ್ಲೋಕಗಳನ್ನು ತಪ್ಪಾಗಿ ವಿವರಿಸಿದ್ದಾರೆ. ಚಿತ್ರ ಬಿಡುಗಡೆಯಾದರೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ, ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಬಹುದು ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಿತ್ತು.
ಗುರುವಾರ ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಬಿ ಕೆ ಭುವನೇಂದ್ರ ಕುಮಾರ್ ಅವರು, ವಿದ್ಯುನ್ಮಾನ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳು, ಸಿನಿಮಾ ಥಿಯೇಟರ್‌ಗಳು, ಖಾಸಗಿ ಟೆಲಿವಿಷನ್ ಚಾನೆಲ್‌ಗಳು ಮತ್ತು ಇತರ ಮಾಧ್ಯಮಗಳಲ್ಲಿ ‘ಹಮಾರೆ ಬಾರಹ್’ ಸಿನಿಮಾ ಮತ್ತು ಅದರ ಟ್ರೇಲರ್ ಬಿಡುಗಡೆಯನ್ನು ಎರಡು ವಾರಗಳವರೆಗೆ ಅಥವಾ ಮುಂದಿನ ಸೂಚನೆ ಬರುವವರೆಗೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
Home Department ಕರ್ನಾಟಕ ಸಿನಿಮಾಗಳ ನಿಯಂತ್ರಣ ಕಾಯಿದೆ, 1964 ರ ಸೆಕ್ಷನ್ 15(1) ಮತ್ತು 15(5) ಅಡಿಯಲ್ಲಿ ನಿಷೇಧ ಹೇರಲಾಗಿದೆ.
ಕಾಯ್ದೆಯ ಸೆಕ್ಷನ್ 15(2) ರ ಪ್ರಕಾರ ನಿಷೇಧ ಹೇರುವ ಮುನ್ನ ಚಿತ್ರ ನಿರ್ಮಾಪಕರಿಗೆ ಸರ್ಕಾರ ನೋಟಿಸ್ ಜಾರಿ ಮಾಡಬೇಕಾಗಿದ್ದರೂ, ಈ ಅಗತ್ಯವನ್ನು ಪೂರೈಸಲು ಸಾಕಷ್ಟು ಸಮಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಏಕೆಂದರೆ ಚಿತ್ರದ ನಿರ್ದೇಶಕ ಕಮಲ್ ಚಂದ್ರ ಮತ್ತು ನಿರ್ಮಾಪಕರಾದ ಬೀರೇಂದ್ರ ಭಗತ್, ರವಿ ಎಸ್ ಗುಪ್ತಾ, ಶಿಯೋ ಬಾಲಕ್ ಸಿಂಗ್, ಸಂಜಯ್ ನಾಗ್ಪಾಲ್ ಮತ್ತು ಇತರರು ಕರ್ನಾಟಕದ ಹೊರಗೆ ನೆಲೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...