Thursday, April 16, 2026
Thursday, April 16, 2026

E. Tukaram ಸಂಸದರಾಗಿ ಆಯ್ಕೆಯಾದ ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ಮಗಳಿಗೆ ಟಿಕೆಟ್ ಬೇಡಿಕೆ

Date:

E. Tukaram ನೂತನ ಸಂಸದರಾಗಿ ಆಯ್ಕೆಯಾಗಿರುವ ಇ ತುಕಾರಾಂ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ದರೆ ಉಪಚುನಾವಣೆಗೆ ಮಗಳಿಗೆ ಟಿಕೆಟ್ ಕೊಡಬೇಕೆಂದು ಮನವಿ ಮಾಡಿದ್ದಾರೆ .

ತುಕಾರಾಮ್ ಅವರ ಅನುಯಾಯಿಗಳು ಮತ್ತು ಬೆಂಬಲಿಗರು ಕೆಲವು ದಿನಗಳ ಹಿಂದೆ ನಾಗೇಂದ್ರ ಅವರ ರಾಜೀನಾಮೆಯ ಸೂಚನೆಯನ್ನು ಪಡೆದ ನಂತರ, ಸಭೆ ನಡೆಸಿ ತಮ್ಮ ನಾಯಕನನ್ನು ಸಂಪುಟಕ್ಕೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ತುಕಾರಾಂ ಅವರು ಬಳ್ಳಾರಿಯಲ್ಲಿ ಬಿಜೆಪಿಯ ಬಿ ಶ್ರೀರಾಮುಲು ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ತುಕಾರಾಂ ಅವರು ಇದೀಗ ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.

E. Tukaram ಒಂದು ವೇಳೆ ಕಾಂಗ್ರೆಸ್‌ ಹೈಕಮಾಂಡ್‌ ಸಚಿವ ಸಂಪುಟದ ಬೇಡಿಕೆಯನ್ನು ಈಡೇರಿಸಿದರೆ, ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪುತ್ರಿ ಸೌಪರ್ಣಿಕಾಗೆ ಬಳ್ಳಾರಿ ಲೋಕಸಭೆ ಟಿಕೆಟ್‌ ಕೇಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ತುಕಾರಾಂ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದರು. ಆದರೆ ನಾಗೇಂದ್ರ ಅವರ ಮನವೊಲಿಸಿ, ಶ್ರೀರಾಮುಲು ವಿರುದ್ಧ ಗೆಲ್ಲಿಸುವುದಾಗಿ ಭರವಸೆ ನೀಡಿದರು.

ತುಕಾರಾಂ ಅವರು ನಾಲ್ಕು ಬಾರಿ ಶಾಸಕರಾಗಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ (2018-19) ಸಚಿವರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Sports and Cultural Club ಬಾಕ್ಸ್ ಕ್ರಿಕೆಟ್ ಟೂರ್ನಿ: ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಚಾಂಪಿಯನ್ಸ್

JCI Sports and Cultural Club ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್...

B.Y. Raghavendra ಭಾರತದಲ್ಲಿ ಮಹಿಳಾ ಮೀಸಲಾತಿಯನ್ನ ಐತಿಹಾಸಿಕವಾಗಿ ಜಾರಿಗೆ ತರಲಾಗುತ್ತಿದೆ- ಬಿ.ವೈ.ರಾಘವೇಂದ್ರ

B.Y. Raghavendra ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಬುತ್ವವಾದ ಭಾರತದಲ್ಲಿ ಐತಿಹಾಸಿಕ ಮಹಿಳಾ...

B.Y. Raghavendra ಶಿವಮೊಗ್ಗದ ಸಂಚಾರ ವ್ಯವಸ್ಥೆ ಸುಧಾರಣೆ ಮಾಸ್ಟರ್ ಪ್ಲಾನ್: ಪ್ರಗತಿ ಪರಿಶೀಲನ ಸಭೆ

B.Y. Raghavendra ಶಿವಮೊಗ್ಗ ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆಗಳ...