Wednesday, February 4, 2026
Wednesday, February 4, 2026

Council of Ministers ಕೇಂದ್ರದ ಮೋದಿ ಸಂಪುಟದಲ್ಲಿ ಕರ್ನಾಟಕದ ಐವರು ಯಾರು?ಯಾವ ಖಾತೆ?

Date:

Council of Ministers ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ಎಚ್‌.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್‌ ಹಾಗೂ ಪ್ರಹ್ಲಾದ ಜೋಶಿ ಸ್ಥಾನ ಪಡೆದಿದ್ದಾರೆ.

ಪ್ರಹ್ಲಾದ ಜೋಶಿ (61)

ಕ್ಷೇತ್ರ/ರಾಜ್ಯ: ಧಾರವಾಡ, ಕರ್ನಾಟಕ

ವಿದ್ಯಾರ್ಹತೆ: ಬಿಎ
5 ಬಾರಿ ಲೋಕಸಭೆಗೆ ಆಯ್ಕೆ

ಮೋದಿ-2 ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು-ಗಣಿ ವ್ಯವಹಾರಗಳ ಸಚಿವರಾಗಿ ಕೆಲಸ. ಈ ಮೂಲಕ ಮೋದಿ ಅವರ ಪರಮಾಪ್ತ ಎಂದು ಖ್ಯಾತಿ ಪಡೆದಿದ್ದಾರೆ‌.

ಎಚ್‌.ಡಿ ಕುಮಾರಸ್ವಾಮಿ (64)

ಕ್ಷೇತ್ರ: ಮಂಡ್ಯ, ಕರ್ನಾಟಕ

ವಿದ್ಯಾರ್ಹತೆ: ಬಿಎಸ್ಸಿ

3ನೇ ಬಾರಿ ಸಂಸದ, ಮಾಜಿ ಮುಖ್ಯಮಂತ್ರಿ

Council of Ministers ಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಮಂತ್ರಿ. ಕರ್ನಾಟಕದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ನಿರ್ವಹಣೆ. ಮಾಜಿ ಪ್ರಧಾನಿ ದೇವೇಗೌಡ ಅವರ ಪುತ್ರ. ಜೆಡಿಎಸ್‌ ಪಕ್ಷದ ನೇತಾರರಾಗಿ ಕರ್ನಾಟಕದಲ್ಲಿ ಪಕ್ಷ ಸಂಘಟಿಸಿದ ಅಪಾರ ಅನುಭವ ಹೊಂದಿದ್ದಾರೆ.

ನಿರ್ಮಲಾ ಸೀತಾರಾಮನ್‌ (65)

ಕ್ಷೇತ್ರ/ರಾಜ್ಯ: ಕರ್ನಾಟಕ
ವಿದ್ಯಾರ್ಹತೆ: ಸ್ನಾತಕೋತ್ತರ ಪದವೀಧರೆ

ಕರ್ನಾಟಕದಿಂದ 3 ಬಾರಿ ರಾಜ್ಯಸಭೆ ಸದಸ್ಯೆ

ವಿತ್ತ, ವಾಣಿಜ್ಯ, ಕೈಗಾರಿಕೆ ಸಚಿವೆಯಾಗಿ ಕೆಲಸ ಮಾಡಿದ ಅನುಭವ. ಮೋದಿ-2 ಸರ್ಕಾರದಲ್ಲಿ ವಿತ್ತ ಸಚಿವೆಯಾಗಿ ಸಾಕಷ್ಟು ಪ್ರಶಂಸೆ ಹಾಗೂ ಟೀಕೆ-ಟಿಪ್ಪಣಿ, ಎರಡಕ್ಕೂ ಗುರಿಯಾಗಿದ್ದಾರೆ.

ಸೋಮಣ್ಣ

ಕ್ಷೇತ್ರ ತುಮಕೂರು
ಜಾತಿ ಲಿಂಗಾಯತ
ವಿದ್ಯಾರ್ಹತೆ ಬಿಎ
ಸಂಸದ 1ನೇ ಸಲ
ಕೇಂದ್ರ ಸಚಿವ 1ನೇ ಸಲ ಆಯ್ಕೆಯಾಗಿದ್ದಾರೆ.

ಶೋಭಾ ಕರಂದ್ಲಾಜೆ(57)

ಕ್ಷೇತ್ರ: ಬೆಂಗಳೂರು ಉತ್ತರ, ಕರ್ನಾಟಕ

ವಿದ್ಯಾರ್ಹತೆ: ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿ

ಮೂರನೇ ಬಾರಿ ಲೋಕಸಭೆಗೆ, ಕೇಂದ್ರ ಸಚಿವೆ

2014,2019ರಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ. ಕೇಂದ್ರದಲ್ಲಿ ಕೃಷಿ ರಾಜ್ಯ ಸಚಿವೆ. ಸಂಸದೆಗೂ ಮುನ್ನ ಎಂಎಲ್‌ಸಿ, ಶಾಸಕಿ. ಗ್ರಾಮೀಣಾಭಿವೃದ್ದಿ & ಪಂಚಾಯತ್ ರಾಜ್, ಇಂಧನ ಸಚಿವೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...