Wednesday, August 12, 2026
Wednesday, August 12, 2026

Renukaswamy Chitradurga ರೇಣುಕಾಸ್ವಾಮಿ ಬರ್ಬರ ಹತ್ಯೆ: ಜಿಲ್ಲಾ ಜಂಗಮ ಸಮಾಜದಿಂದ‌ ಖಂಡನೆ

Date:

Renukaswamy Chitradurga ಜಂಗಮ ಸಮಾಜದ ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಚಲನಚಿತ್ರನಟ ದರ್ಶನ್ ಅಭಿಮಾನಿಬಳಗದ ಸದಸ್ಯರ ಮುಖಾಂತರ ಬೆಂಗಳೂರಿಗೆ ಕರೆಸಿ ಚಿತ್ರಹಿಂಸೆ ನೀಡಿ ನರಳಿ ನರಳಿ ಸಾಯುವಂತೆ ಮಾಡಿರುವ ಘಟನೆಯನ್ನು ಜಿಲ್ಲಾ ಜಂಗಮ ಸಮಾಜ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಮಾಜದ ಮುಖಂಡರು, ರೇಣುಕಾ ಸ್ವಾಮಿಗೆ ತನ್ನ ಅಭಿಮಾನಿಗಳ ಮೂಲಕ ವಿವಿಧ ಆಯುಧಗಳಿಂದ ಅವರ ದೇಹದ ಅಂಗಗಳು ಊನಆಗುವಂತೆ ಹೊಡೆದು ಸಾಯಿಸಿರುವುದು ರಾಕ್ಷಸ ಪ್ರವೃತ್ತಿಯಾಗಿದೆ.

ಸಮಾಜಕ್ಕೆ ಚಲನಚಿತ್ರದ ಮೂಲಕ ನೀತಿ ಪಾತ್ರಗಳು ನೀತಿಪಾತ್ರಗಳನ್ನು ನಿರ್ವಹಿಸಿ ಸಮಾಜಕ್ಕೆ ಮಾರ್ಗದರ್ಶನ ನೀಡುವ ಇಂತಹ ಗೋಮುಖ ವ್ಯಾಘ್ರತನದ ನಟರು ಮಾಡಿರುವ ಕೃತ್ಯವನ್ನು ಕರ್ನಾಟಕದ ಎಲ್ಲ ಜಂಗಮ ಬಂಧುಗಳು ಖಂಡಿಸುತ್ತಾರೆ ಎಂದಿದ್ದಾರೆ.

Renukaswamy Chitradurga ಚಿತ್ರಹಿಂಸೆ ನೀಡಿರುವ ಇವರಿಗೆ ಮರಣದಂಡನೆಯನ್ನು ವಿಧಿಸಿದರೂ ಶಿಕ್ಷೆ ಕಡಿಮೆಯೇ. ಅವರಿಗೂ ಅವರೊಡನೆ ಚಿತ್ರಹಿಂಸೆ ನೀಡಲು ಸಹಕರಿಸಿದ ಎಲ್ಲರಿಗೂ ಘೋರಶಿಕ್ಷೆ ವಿಧಿಸುವಂತೆ ಸಮಾಜದ ಮುಖಂಡರು ಆಗ್ರಹಿಸಿದ್ದಾರಲ್ಲದೆ, ಅವರ ಕೃತ್ಯವನ್ನು ಖಂಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...