Thursday, June 25, 2026
Thursday, June 25, 2026

Renukaswamy Chitradurga ರೇಣುಕಾಸ್ವಾಮಿ ಬರ್ಬರ ಹತ್ಯೆ: ಜಿಲ್ಲಾ ಜಂಗಮ ಸಮಾಜದಿಂದ‌ ಖಂಡನೆ

Date:

Renukaswamy Chitradurga ಜಂಗಮ ಸಮಾಜದ ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಚಲನಚಿತ್ರನಟ ದರ್ಶನ್ ಅಭಿಮಾನಿಬಳಗದ ಸದಸ್ಯರ ಮುಖಾಂತರ ಬೆಂಗಳೂರಿಗೆ ಕರೆಸಿ ಚಿತ್ರಹಿಂಸೆ ನೀಡಿ ನರಳಿ ನರಳಿ ಸಾಯುವಂತೆ ಮಾಡಿರುವ ಘಟನೆಯನ್ನು ಜಿಲ್ಲಾ ಜಂಗಮ ಸಮಾಜ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಮಾಜದ ಮುಖಂಡರು, ರೇಣುಕಾ ಸ್ವಾಮಿಗೆ ತನ್ನ ಅಭಿಮಾನಿಗಳ ಮೂಲಕ ವಿವಿಧ ಆಯುಧಗಳಿಂದ ಅವರ ದೇಹದ ಅಂಗಗಳು ಊನಆಗುವಂತೆ ಹೊಡೆದು ಸಾಯಿಸಿರುವುದು ರಾಕ್ಷಸ ಪ್ರವೃತ್ತಿಯಾಗಿದೆ.

ಸಮಾಜಕ್ಕೆ ಚಲನಚಿತ್ರದ ಮೂಲಕ ನೀತಿ ಪಾತ್ರಗಳು ನೀತಿಪಾತ್ರಗಳನ್ನು ನಿರ್ವಹಿಸಿ ಸಮಾಜಕ್ಕೆ ಮಾರ್ಗದರ್ಶನ ನೀಡುವ ಇಂತಹ ಗೋಮುಖ ವ್ಯಾಘ್ರತನದ ನಟರು ಮಾಡಿರುವ ಕೃತ್ಯವನ್ನು ಕರ್ನಾಟಕದ ಎಲ್ಲ ಜಂಗಮ ಬಂಧುಗಳು ಖಂಡಿಸುತ್ತಾರೆ ಎಂದಿದ್ದಾರೆ.

Renukaswamy Chitradurga ಚಿತ್ರಹಿಂಸೆ ನೀಡಿರುವ ಇವರಿಗೆ ಮರಣದಂಡನೆಯನ್ನು ವಿಧಿಸಿದರೂ ಶಿಕ್ಷೆ ಕಡಿಮೆಯೇ. ಅವರಿಗೂ ಅವರೊಡನೆ ಚಿತ್ರಹಿಂಸೆ ನೀಡಲು ಸಹಕರಿಸಿದ ಎಲ್ಲರಿಗೂ ಘೋರಶಿಕ್ಷೆ ವಿಧಿಸುವಂತೆ ಸಮಾಜದ ಮುಖಂಡರು ಆಗ್ರಹಿಸಿದ್ದಾರಲ್ಲದೆ, ಅವರ ಕೃತ್ಯವನ್ನು ಖಂಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...